Advertisement

ಎಸ್‌ಡಿಆರ್‌ಎಫ್ ನಿಂದ 31 ಕೋಟಿ ರೂ. ಬಿಡುಗಡೆ

06:00 AM Sep 27, 2018 | Team Udayavani |

ಬೆಂಗಳೂರು:ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) ಪರಿಹಾರ ಕಾರ್ಯಗಳಿಗಾಗಿ 31 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಕೃತಿ ವಿಕೋಪ ತುರ್ತು ಪರಿಹಾರ ಕಾರ್ಯಗಳಿಗಾಗಿ ಪ್ರತಿ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಐದು ಕೋಟಿ ರೂ. ಲಭ್ಯ ಇರುವಂತೆ ನೋಡಿಕೊಳ್ಳಲು ಮತ್ತು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ತಲೆದೋರಿದ್ದು ಆ ಜಿಲ್ಲೆಗಳ ಬೇಡಿಕೆ ಆಧರಿಸಿ ಹಣ ಬಿಡಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

31 ಕೋಟಿ ರೂ. ರೂ. ಹಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 5 ಕೋಟಿ ರೂ. ಬಾಗಲಕೋಟೆ ಜಿಲ್ಲೆಗೆ 4 ಕೋಟಿರೂ., ಬೆಳಗಾವಿ, ವಿಜಯಪುರ, ದಾವಣಗೆರೆ ಮತ್ತು ಉನ್ನರ ಕನ್ನಡ ಜಿಲ್ಲೆಗಳಿಗೆ ತಲಾ 3 ಕೋಟಿ ರೂ., ಬಳ್ಳಾರಿ, ಧಾರವಾಢ, ರಾಯಚೂರು, ಶಿವಮೊಗ್ಗ ಮತ್ತು  ಉಡುಪಿ ಜಿಲ್ಲೆಗಳಿಗೆ ತಲಾ 2 ಕೋಟಿ ರೂ. ಸಿಗಲಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಮುಂಗಾರಿನಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಅತಿವಷ್ಟಿಯಿಂದ ತತ್ತರಿಸಿದ್ದಾರೆ. ಉಳಿದ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿವೆ. ಈಗಾಗಲೇ 23 ಜಿಲ್ಲೆಗಳ  89 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next