Advertisement

4ಸಾವಿರ ರೂ. ಕೋವಿಡ್ ಪರಿಹಾರ, ಆವಿನ್ ಹಾಲಿನ ದರ ಕಡಿತ: ನೂತನ ಸಿಎಂ ಸ್ಟಾಲಿನ್ ಘೋಷಣೆ

04:58 PM May 07, 2021 | Team Udayavani |

ಚೆನ್ನೈ: ಕೋವಿಡ್ 19 ಸೋಂಕಿನಿಂದ ಜನರು ಭೀತಿಗೊಳಗಾಗಿರುವ ನಡುವೆಯೇ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶುಕ್ರವಾರ(ಮೇ 07), ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ನಾಲ್ಕು ಸಾವಿರ ರೂಪಾಯಿ ಕೋವಿಡ್ ಪರಿಹಾರ, ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದ್ದಾರೆ.

Advertisement

ಇದನ್ನೂ ಓದಿ:ಕೋವಿಡ್ ಮೂರನೇ ಅಲೆಯನ್ನು ಹೊಡೆದುರುಳಿಸಲಿದೆ ಜರ್ಮನ್ :  ಜೆನ್ಸ್ ಸ್ಪಾನ್  

ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಇದೀಗ ನೂತನವಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಎಂಕೆ ಸ್ಟಾಲಿನ್ ಅನುಷ್ಠಾನಕ್ಕೆ ತಂದಿರುವುದಾಗಿ ವರದಿ ತಿಳಿಸಿದೆ.

ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ 19 ಚಿಕಿತ್ಸೆಯನ್ನು ಸರ್ಕಾವಿ ವಿಮಾ ಯೋಜನೆಯಡಿ ತರಲಾಗುವುದು, ಇದರಿಂದ ಜನರಿಗೆ ಹೆಚ್ಚಿನ ನೆರವು ನೀಡಿದಂತಾಗುತ್ತದೆ ಎಂದು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಹೊರಡಿಸಿದ ಮೊದಲ ಆದೇಶದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

Advertisement

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರತಿಯೊಂದು ಕುಟುಂಬಕ್ಕೂ ಕೋವಿಡ್ ಪರಿಹಾರವಾಗಿ ನಾಲ್ಕು ಸಾವಿರ ರೂಪಾಯಿ ನೀಡುವ ಆದೇಶಕ್ಕೆ ಸಹಿ ಹಾಕಿದ್ದು, ಮೇ ತಿಂಗಳ ಮೊದಲ ಕಂತಿನ ಎರಡು ಸಾವಿರ ರೂಪಾಯಿಹಣ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next