Advertisement

ಹಾಲು ಉತ್ಪಾದಕರ ಮಹಾ ಮಂಡಳಿಯಿಂದ 5 ಕೋ. ರೂ.

11:18 PM Apr 08, 2020 | Sriram |

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋ. ರೂ. ದೇಣಿಗೆ ನೀಡಿದೆ.

Advertisement

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬುಧವಾರ ಭೇಟಿ ಮಾಡಿದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿ. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿ, 5 ಕೋ. ರೂ. ಗಳ ಚೆಕ್‌ ಹಸ್ತಾಂತರಿಸಿತು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಹಾಲು ಸಂಗ್ರಹ ಮತ್ತು ಮಾರಾಟದಲ್ಲಿ ತೊಡಗಿರುವ ಎಲ್ಲರಿಗೂ ಥರ್ಮಲ್‌ ಸ್ಕಿ$›àನಿಂಗ್‌ ಮಾಡಲಾಗುತ್ತಿದ್ದು, ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಗುತ್ತಿಗೆ ನೌಕರರನ್ನು ಉತ್ತೇಜಿಸುವ ಉದ್ದೇಶದಿಂದ ಹೆಚ್ಚುವರಿ ವೇತನ ನೀಡಲಾಗುತ್ತಿದೆ. ಚಾಲಕರಿಗೆ 500 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅಲ್ಲದೆ ಪಶು ಆಹಾರ ಮಾರಾಟ ದರಕ್ಕೆ ಪ್ರತಿ ಟನ್‌ಗೆ ನೀಡುತ್ತಿರುವ 500 ರೂ. ರಿಯಾಯಿತಿಯನ್ನು ಎಪ್ರಿಲ್‌ವರೆಗೂ ವಿಸ್ತರಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next