Advertisement

50 ಕೋಟಿ ರೂ. ಸಾಲ ಮಾಡಿದ್ದ ಗಣೇಶ್‌

11:05 AM Jun 24, 2018 | |

ಬೆಂಗಳೂರು: ಪತ್ನಿಯನ್ನು ಕೊಂದು ಇಬ್ಬರು ಮಕ್ಕಳ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಗಣೇಶ್‌ 50 ಕೋಟಿ ರೂ. ಸಾಲ ಮಾಡಿದ್ದ ವಿಚಾರ ತನಿಖೆಯಿಂದ ತಿಳಿದುಬಂದಿದೆ.

Advertisement

ಕಗ್ಗಲಿಪುರದ ನೆಟ್ಟಿಗೆರೆಯಲ್ಲಿ ಹರ್ಬಲ್‌ವುಡ್‌ ಫಾರ್ಮಹೌಸ್‌ ಹೆಸರಿನ ರೆಸಾರ್ಟ್‌ ಖರೀದಿಸಿದ್ದ ಗಣೇಶ್‌, ಬಿಡದಿ ಬಳಿ ಕ್ಲಬ್‌ಹೌಸ್‌ ಒಂದನ್ನು ನಿರ್ಮಿಸಿದ್ದು, ಇತರೆ ವ್ಯವಹಾರಗಳಿಗಾಗಿ ಕೋಟ್ಯಂತರ ರೂ. ಸಾಲ ಮಾಡಿದ್ದರು. ಆದರೆ, ನಿರೀಕ್ಷೆಯಷ್ಟು ಲಾಭ ಬಾರದಿದ್ದಾಗ ಹಳೇ ಸಾಲ ತೀರಿಸಲು ಮತ್ತಷ್ಟು ಸಾಲ ಪಡೆದಿದ್ದು, ಒಟ್ಟು 50 ಕೋಟಿ ರೂ. ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದಾಗಿ ಗಣೇಶ್‌ ವಿಚಾರಣೆ ವೇಳೆ ಹೇಳಿಕೆ ನೀಡಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳು ಪಾರು: ಗುಂಡೇಟು ತಿಂದು ತೀವ್ರವಾಗಿ ಗಾಯಗೊಂಡಿದ್ದ ಗಣೇಶ್‌ ಪುತ್ರ ಸಿದ್ಧಾರ್ಥ ಹಾಗೂ ದತ್ತು ಪುತ್ರಿ ಸಾಕ್ಷಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ಕೋಣನಕುಂಟೆಯ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಗಣೇಶ್‌ ವಿರುದ್ಧ ಪತ್ನಿ ಕೊಲೆ ಹಾಗೂ ಇಬ್ಬರು ಮಕ್ಕಳ ಹತ್ಯೆ ಯತ್ನ, ಅಕ್ರಮ ಬಂಧನ ಸೇರಿ ಮೂರು ಪ್ರತ್ಯೇಕ ಪ್ರಕರಣಗಳನ್ನು ಜಯನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next