Advertisement

ಬಿಹಾರಕ್ಕೆ 500 ಕೋಟಿ ರೂ.

10:32 AM Aug 27, 2017 | |

ಪೂರ್ಣಿಯ: ಪ್ರವಾಹ ಪೀಡಿತ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದ್ದು, ರಾಜ್ಯಕ್ಕೆ ತತ್‌ಕ್ಷಣದ ಪರಿಹಾರವಾಗಿ 500 ಕೋಟಿ ರೂ. ಘೋಷಿಸಿದ್ದಾರೆ. ಜತೆಗೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Advertisement

ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರೊಂದಿಗೆ ಪ್ರಧಾನಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಬಳಿಕ ಇಬ್ಬರೂ ನಾಯಕರೊಂದಿಗೆ ಸಭೆ ನಡೆಸಿ, ಪರಿಹಾರ ಪ್ಯಾಕೇಜ್‌ ಘೋಷಿಸಿದರು. ಜತೆಗೆ, ಬಿಹಾರಕ್ಕೆ ಕೇಂದ್ರದ ತಂಡ ಕಳುಹಿಸಿ ಪ್ರವಾಹದಿಂದ ಸಂಭವಿಸಿರುವ ಹಾನಿ ಕುರಿತು ಲೆಕ್ಕ ಮಾಡಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next