Advertisement

ಕೋವಿಡ್ ಸೋಂಕಿನಿಂದ ಹೆತ್ತವರನ್ನು ಕಳದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ : ಮಧ್ಯಪ್ರದೇಶ ಸಿಎಂ

08:08 PM May 13, 2021 | Team Udayavani |

ಭೋಪಾಲ: ಕೋವಿಡ್ ಸೋಂಕಿನಿಂದ ಹೆತ್ತವರಿಬ್ಬರೂ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಪ್ರತಿ ತಿಂಗಳಿಗೆ 5 ಸಾವಿರ ರೂ. ವಿತ್ತೀಯ ನೆರವು ನೀಡಲಾಗುತ್ತದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಗುರುವಾರ ತಿಳಿಸಿದ್ದಾರೆ.

Advertisement

ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಒಂದು ವೇಳೆ, ವಿತ್ತೀಯ ನೆರವಿಗೆ ಅರ್ಹರಾಗದೇ ಇದ್ದರೆ ಅಂಥವರಿಗೆ ಉಚಿತ ಆಹಾರ ಧಾನ್ಯ ನೀಡಲಾಗುತ್ತದೆ. ಇದರ ಜತೆಗೆ ಸೋಂಕಿನಿಂದ ನೊಂದವರು ಹೊಸ ವ್ಯಾಪಾರ, ಉದ್ದಿಮೆ ಆರಂಭಿಸುವವರಿಗೆ ಬ್ಯಾಂಕ್‌ಗಳಲ್ಲಿ ಸಾಲ ಸಿಗುವಂತೆ ಮಾಡಲು ಸರ್ಕಾರವೇ ಜಾಮೀನುದಾರನಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ರಾಜ್ಯದಲ್ಲಿಂದು 35,297 ಹೊಸ ಕೋವಿಡ್ ಪ್ರಕರಣ ಪತ್ತೆ: 344 ಜನರ ಸಾವು, 34,057 ಮಂದಿ ಗುಣಮುಖ

ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡವರ ಕಣ್ಣೀರು ಒರೆಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡಲಿದೆ. ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಬರಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next