Advertisement

Crop loss; 5,200 ಕೋಟಿ ರೂ. ಬೆಳೆ ನಷ್ಟದ ಅಂದಾಜು: ಸಚಿವ ಎನ್‌.ಚಲುವರಾಯ ಸ್ವಾಮಿ

08:17 PM Oct 22, 2023 | Team Udayavani |

ಹಾಸನ: ರಾಜ್ಯದ 216 ತಾಲೂಕುಗಳನ್ನು ತೀವ್ರ ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು, 5,200 ಕೋಟಿ ರೂ. ಬೆಳೆ ನಷ್ಟದ ಅಂದಾಜು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯ ಸ್ವಾಮಿ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ ನಂತರ 2ನೇ ಹಂತದಲ್ಲಿ 21 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.

ಮೊದಲ ಹಂತದ ಬರ ಘೋಷಣೆಯ ತಾಲೂಕುಗಳಲ್ಲಿ ಕೇಂದ್ರದ ಅಧಿಕಾರಿಗಳ ತಂಡವು ಪರಿಶೀಲನೆ ಮಾಡಿಕೊಂಡು ಹೋಗಿದೆ. ಆದರೆ ಇನ್ನೂ ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿಲ್ಲ. ಈ ವಾರದೊಳಗೆ ವರದಿ ಕೊಡುವ ನಿರೀಕ್ಷೆಯಿದೆ ಎಂದರು.

ಶೇ.98 ರಷ್ಟು ಬೆಳೆ ಹಾನಿಯ ಸಮೀಕ್ಷೆ: ಕೇಂದ್ರ ಕೃಷಿ ಸಚಿವರ ಭೇಟಿಗೆ ಸಮಯ ಕೇಳಲಾಗಿದ್ದು, ಇನ್ನೂ ಅವಕಾಶ ಕೊಟ್ಟಿಲ್ಲ. ಕೇಂದ್ರ ಕೃಷಿ ಸರ್ಕಾರದ ಕಾರ್ಯದರ್ಶಿಗಳ ಭೇಟಿಗಾಗಿ ಅ.25 ರಂದು ಸಮಯ ನಿಗದಿಯಾಗಿದ್ದು, ಹೆಚ್ಚುವರಿಯಾಗಿ ಬರ ಘೋಷಣೆ ಆಗಿರುವ 21 ತಾಲೂಕುಗಳ ವರದಿ ಸಲ್ಲಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಶೇ.98 ರಷ್ಟು ಬೆಳೆ ಹಾನಿಯ ಸಮೀಕ್ಷೆ ನಡೆದಿದ್ದು, 5,200 ಕೋಟಿ ರೂ. ಬೆಳೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರಿಂದ ಮೆಕ್ಕೆಜೋಳ ಖರೀದಿಗೆ ಕೆಎಂಎಫ್ ನಿರ್ಧಾರ
ಹಾಸನ: ರೈತರಿಂದ ನೇರವಾಗಿ ಕೆಎಂಎಫ್ನಿಂದ ಮೆಕ್ಕೆಜೋಳ ಖರೀದಿಸುವ ನಿರ್ಧಾರ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗದಿತ ದರದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸುವ ಸಂಬಂಧ ಈಗಾಗಲೇ ಕೆಎಂಎಫ್ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ್ದೇನೆ. ಸಾಲುಸಾಲು ರಜೆಗಳ ಹಿನ್ನೆಲೆಯಲ್ಲಿ ಖರೀದಿಸಲು ಸಾಧ್ಯವಾಗಿಲ್ಲ. ವಾರದೊಳಗೆ ಅಧಿಕೃತವಾಗಿ ಮೆಕ್ಕೆ ಜೋಳ ಖರೀದಿಯ ಆದೇಶ ಹೊರಬೀಳಲಿದೆ ಎಂದು ಹೇಳಿದರು.

ವಿವಾದಕ್ಕೆ ತೆರೆ: ರೈತರಿಂದ ಕೆಎಂಎಫ್ ನೇರವಾಗಿ ಮೆಕ್ಕೆಜೋಳ ಖರೀದಿಸಬೇಕು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ ಅವರು ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಜೆಡಿಎಸ್‌ನಿಂದ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಸಹಕಾರ ಸಚಿವರೇ ಮೆಕ್ಕೆಜೋಳ ಖರೀದಿಗೆ ತೀರ್ಮಾನವಾಗಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಂತಾಗಿದೆ.

ಸಹಕಾರ ಇಲಾಖೆ ಅಧೀನದಲ್ಲಿ ಕೆಎಂಎಫ್ ಬಂದರೂ ಕೆಎಂಎಫ್ ಪ್ರತ್ಯೇಕ ಮಂಡಳಿ. ಅದಕ್ಕೆ ಅಧ್ಯಕ್ಷರು, ಆಡಳಿತ ಮಂಡಳಿ ಇದೆ. ಅಧಿಕೃತವಾಗಿ ಅವರು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸಹಕಾರ ಸಚಿವನಾಗಿ ನಾನು ಮೆಕ್ಕೆಜೋಳ ಖರೀದಿಗೆ ಸೂಚನೆ ಕೊಟ್ಟಿದ್ದೇನೆ. ಮುಂದಿನ ಪ್ರಕ್ರಿಯೆಯನ್ನು ಕೆಎಂಎಫ್ ನಿರ್ವಹಣೆ ಮಾಡಲಿದೆ ಎಂದು ಕೆ.ಎನ್‌.ರಾಜಣ್ಣ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next