Advertisement

ತುರ್ತು ನೀರು ಪೂರೈಕೆಗೆ 6 ಕೋಟಿ ರೂ.: ಐವನ್‌

01:36 AM May 07, 2019 | Sriram |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ತುರ್ತು ನೀರು ಪೂರೈಕೆಗೆ ಜಿಲ್ಲಾಡಳಿತಕ್ಕೆ ಸರಕಾರ 6 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ತುಂಬೆಯಲ್ಲಿ ಈಗ 4.38 ಮೀಟರ್‌ ನೀರು ಇದೆ. ಕಳೆದ ವರ್ಷ ಇದೇ ಸಮಯ 5.6 ಮೀಟರ್‌ ನೀರಿತ್ತು. ಈ ಹಂತದಲ್ಲಿ ಟ್ಯಾಂಕರ್‌ ಸಹಿತ ಇತರ ವ್ಯವಸ್ಥೆಗಳ ಮೂಲಕ ನೀರು ಪೂರೈಕೆ ಮಾಡಲು ಜಿಲ್ಲಾಧಿಕಾರಿ ಜತೆ ಸಮಾಲೋಚನೆ ಮಾಡಲಾಗಿದೆ ಎಂದರು.

ಪ್ರಧಾನಿ ಮೋದಿಯಿಂದ ಕೀಳು ಮಟ್ಟದ ಭಾಷೆ
ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿಯ ವಿರುದ್ಧ ಕೀಳು ಮಟ್ಟದ ಭಾಷಾ ಪ್ರಯೋಗ ನಡೆಸಿದ್ದಾರೆ. ಬೋಫೋರ್ಸ್‌ ಹಗರಣದಿಂದ ನ್ಯಾಯಾಲಯದ ಮೂಲಕ ದೋಷ ಮುಕ್ತರಾದ ಮತ್ತು ದಿವಂಗತರಾದ ರಾಜೀವ ಗಾಂಧಿ ವಿರುದ್ಧ ತೀರಾ ಕೆಳಮಟ್ಟದ ಭಾಷಾ ಪ್ರಯೋಗ ಪ್ರಧಾನಿಯ ಘನತೆಗೆ ತಕ್ಕುದಾಗಿಲ್ಲ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ನಾಯಕರಾದ ಎ.ಸಿ. ವಿನಯರಾಜ್‌, ಸಂತೋಷ್‌ ಕುಮಾರ್‌ ಶೆಟ್ಟಿ, ಮಾಜಿ ಕಾರ್ಪೊರೇಟರ್‌ಗಳಾದ ಅಪ್ಪಿ, ಪ್ರಕಾಶ್‌ ಸಾಲ್ಯಾನ್‌, ಆಶಾ ಡಿ’ಸಿಲ್ವ ಸಿ.ಎಂ. ಮುಸ್ತಾಫ‌ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next