Advertisement
ಆರ್ಎಸ್ಎಸ್ನ ಮಾಜಿ ಜಿಲ್ಲಾ ಮುಖಂಡ ಮತ್ತು ಪದಾಧಿಕಾರಿ ಶ್ರೀನಿವಾಸನ್ (45) ಅವರು ಇಲ್ಲಿಗೆ ಸಮೀಪದ ಮೇಲಮುರಿಯಲ್ಲಿರುವ ಅವರ ಮೋಟಾರ್ಬೈಕ್ ಅಂಗಡಿಯಲ್ಲಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Related Articles
Advertisement
ಆರ್ಎಸ್ಎಸ್ ಮುಖಂಡನ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಭಾರೀ ಶೋಧ ನಡೆಸುತ್ತಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ವಿಜಯ್ ಸಾಖರೆ ಅವರು ಪಾಲಕ್ಕಾಡ್ ಪಟ್ಟಣಕ್ಕೆ ಆಗಮಿಸಿ ಮೊಕ್ಕಾಂ ಹೂಡಿದ್ದು, 24 ಗಂಟೆಗಳ ಅವಧಿಯಲ್ಲಿ ನಡೆದ ಎರಡು ರಾಜಕೀಯ ಕೊಲೆಗಳ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ತನ್ನ ತಂದೆಯೊಂದಿಗೆ ಮನೆಗೆ ಮರಳುತ್ತಿದ್ದಾಗ ಜಿಲ್ಲೆಯ ಎಲಪ್ಪುಲ್ಲಿಯಲ್ಲಿ ಸುಬೈರ್ (43) ಅವರನ್ನು ಹತ್ಯೆ ಮಾಡಲಾಗಿತ್ತು. ಬಿಜೆಪಿ ಮತ್ತು ಆರ್ ಎಸ್ ಎಸ್ ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ.
ಪಾಲಕ್ಕಾಡ್ ನಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ.