Advertisement

ಅಸಭ್ಯ ವರ್ತನೆ: ಯುವಕನಿಗೆ ವಿದ್ಯಾರ್ಥಿನಿಯಿಂದ ಚಪ್ಪಲಿಯೇಟು

07:23 PM Jun 09, 2023 | Team Udayavani |

ಕುಂದಾಪುರ: ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುವ ವೇಳೆ ರಸ್ತೆಯಲ್ಲಿ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಯುವಕನಿಗೆ ವಿದ್ಯಾರ್ಥಿನಿ ಚಪ್ಪಲಿ ಏಟು ನೀಡಿದ ಘಟನೆ ಶುಕ್ರವಾರ ಕೋಟೇಶ್ವರ ಸಮೀಪದ ವಕ್ವಾಡಿಯಲ್ಲಿ ನಡೆದಿದೆ.

Advertisement

ಬಾರಕೂರು ಮೂಲದ ಸದ್ಯ ಈ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್‌ (35) ಆರೋಪಿ.

ಆರೋಪಿ ನಜೀರ್‌ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು ಕೂಡಲೇ ಆ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಸ್ಥಳೀಯರೆಲ್ಲ ಸೇರಿ, ವಿಚಾರಿಸಿದಾಗ ನಡೆದ ಘಟನೆಯನ್ನು ಆಕೆ ವಿವರಿಸಿದ್ದಾಳೆ. ಈ ವೇಳೆ ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು, ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next