Advertisement

Karnataka: ರುದ್ರಪ್ಪ ಲಮಾಣಿ ವಿಧಾನಸಭೆ ಉಪಾಧ್ಯಕ್ಷ

09:44 PM Jul 04, 2023 | Team Udayavani |

ಬೆಂಗಳೂರು: ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಹಾವೇರಿ ಕಾಂಗ್ರೆಸ್‌ ಶಾಸಕ ರುದ್ರಪ್ಪ ಲಮಾಣಿ ನೇಮಕಗೊಳ್ಳಲಿದ್ದಾರೆ.

Advertisement

ಬುಧವಾರ ಉಪಾಧ್ಯಕ್ಷ ಸ್ಥಾನಕ್ಕೆ ಲಮಾಣಿ ಅವರು ನಾಮಪತ್ರ ಸಲ್ಲಿಸಲಿದ್ದು ನಾಳೆಯೇ ಘೋಷಣೆಯಾಗಲಿದೆ. ಈ ಸಲ ಸಚಿವ ಸಂಪುಟದಲ್ಲಿ ಲಂಬಾಣಿ ಸಮುದಾಯಕ್ಕೆ ಪ್ರಾತಿನಿಧ್ಯ ದೊರೆತಿರಲಿಲ್ಲ. ಹೀಗಾಗಿ ಅದನ್ನು ಸರಿಪಡಿಸುವ ಸಲುವಾಗಿ ಲಮಾಣಿ ಅವರನ್ನು ನೇಮಿಸಲಾಗುತ್ತಿದೆ.

ಇದಕ್ಕೂ ಮುನ್ನ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಲಾಗಿತ್ತು. ಆದರೆ ಅವರು ತಮಗೆ ಸಚಿವ ಸ್ಥಾನವೇ ಬೇಕೆಂದು ಪಟ್ಟು ಹಿಡಿದಿದ್ದರಿಂದ ಅವರ ಬದಲಿಗೆ ಲಮಾಣಿ ಅವರನ್ನು ನೇಮಿಸಲಾಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next