Advertisement

2 ವರ್ಷಕ್ಕೊಮ್ಮೆ ವರ್ಗಾವಣೆಗೆ ನಿಯಮ ರೂಪಿಸಿ

06:28 AM Feb 26, 2019 | Team Udayavani |

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಪಿಎಸ್‌ಐನಿಂದ ಐಪಿಎಸ್‌ವರೆಗಿನ ಎಲ್ಲ ಅಧಿಕಾರಿಗಳನ್ನು 2 ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ಕುರಿತು ಹೊಸ ನಿಯಮ ರೂಪಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಅವರಿಗೆ ಸಿಎಂ ಕುಮಾರಸ್ವಾಮಿ ಸೂಚಿಸಿದ್ದಾರೆ.

Advertisement

ಸೋಮವಾರ ಪೊಲೀಸ್‌ ಪ್ರಧಾನ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ರಾಜ್ಯದ ಎಲ್ಲ ಐಪಿಎಸ್‌ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಈ ಆದೇಶ ನೀಡಿದ್ದಾರೆ. ಕೆಲ ಪೊಲೀಸ್‌ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಬಹಳ ವರ್ಷ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವಂತೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೆಲ ಅಧಿಕಾರಿಗಳು, ವರ್ಗಾವಣೆಗೊಳ್ಳುವ ಪ್ರತಿ ಅಧಿಕಾರಿಗೆ ಅಲ್ಲಿನ ಸ್ಥಳ, ಪ್ರದೇಶ ಹಾಗೂ ಇತರೆ ಮಾಹಿತಿ ತಿಳಿದುಕೊಳ್ಳಲು ಸಾಕಷ್ಟು ಸಮಯ ಬೇಕಾಗುತ್ತದೆ. ಹೀಗಾಗಿ ತಾಂತ್ರಿಕವಾಗಿ ಸಾಧ್ಯವಾಗುವುದಿಲ್ಲ ಎಂದು ಮನವಿ ಮಾಡಿದರು. ಬಳಿಕ ಕನಿಷ್ಠ 2 ವರ್ಷಕ್ಕೊಮ್ಮೆ ವರ್ಗಾವಣೆ ಮಾಡುವ ಕುರಿತು ಹೊಸ ನಿಯಮ ರೂಪಿಸುವಂತೆ ಸಿಎಂ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಎಂ.ಬಿ.ಪಾಟೀಲ್‌ ಅವರು, ಕೆಲವು ಅಧಿಕಾರಿಗಳು ಒಂದೇ ಠಾಣೆಯಲ್ಲಿ ಹಾಗೂ ಎಕ್ಸಿಕ್ಯುಟಿವ್‌ ಹುದ್ದೆಯಲ್ಲೇ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಅವರನ್ನು ನಾನ್‌ ಎಕ್ಸಿಕ್ಯುಟಿವ್‌ ಹುದ್ದೆಗೆ ನಿಯೋಜಿಸಬೇಕು ಎಂದರು. ಇದೇ ವೇಳೆ ಅಕ್ರಮ ಮರಳು ದಂಧೆ ಬಗ್ಗೆ ಪ್ರಸ್ತಾಪಿಸಿದ ಕುಮಾರಸ್ವಾಮಿ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next