Advertisement

ರಷ್ಯಾ-ಉಕ್ರೇನ್‌ ಬಿಕ್ಕಟ್ಟು ಚರ್ಚೆ: ಭಾರತ ಪ್ರತಿನಿಧಿ ಗೈರು

08:59 PM Oct 01, 2022 | Team Udayavani |

ನ್ಯೂಯಾರ್ಕ್‌: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶನಿವಾರ ರಷ್ಯಾ ಮತ್ತು ಉಕ್ರೇನ್‌ ನಡುವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆದಿದೆ. ಅದರಲ್ಲಿ ಭಾರತದ ಪ್ರತಿನಿಧಿ ಗೈರುಹಾಜರಾಗಿದ್ದರು.

Advertisement

ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ವಿಲೀನಗೊಳಿಸಿರುವುದಾಗಿ ರಷ್ಯಾ ಘೋಷಿಸಿಕೊಂಡ ಬೆನ್ನಲ್ಲೇ ಈ ಸಭೆ ನಡೆದಿದ್ದು, ಈ ವಿಲೀನವನ್ನು ಕಾನೂನುಬಾಹಿರ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದೆ.

15 ಸದಸ್ಯರಲ್ಲಿ 10 ಸದಸ್ಯರು ಇದಕ್ಕೆ ಒಪ್ಪಿದ್ದಾರೆ. ಆದರೆ ಶಾಶ್ವತ ಸದಸ್ಯವಾಗಿರುವ ರಷ್ಯಾ ಈ ನಿರ್ಧಾರಕ್ಕೆ ತಡೆಹಿಡಿದಿದೆ. ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಂಬೋಜ್‌, “ಉಕ್ರೇನ್‌ನಲ್ಲಾಗುತ್ತಿರುವ ಬೆಳವಣಿಗೆಯಿಂದಾಗಿ ಭಾರತ ನೊಂದಿದೆ.

ಜೀವವನ್ನು ತೆಗೆಯುವಂತಹ ಯಾವುದೇ ನಿರ್ಧಾರ ಸೂಕ್ತವಲ್ಲ ಎಂದು ನಾವು ಈಗಾಗಲೇ ಹೇಳಿದ್ದೇವೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next