Advertisement

ಉಳವಿ ರಥಬೀದಿ ನಿರ್ಮಾಣಕ್ಕೆ 4 ಕೋಟಿ ಬಿಡುಗಡೆ: ಆರ್.ವಿ.ದೇಶಪಾಂಡೆ

02:51 PM Feb 11, 2021 | Team Udayavani |

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಚ್ಚಹಸಿರು ಪ್ರಕೃತಿ ಸೌಂದರ್ಯದ ಮಡಿಲಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರ ಉಳವಿ ಚನ್ನಬಸವೇಶ್ವರ ದೇವಸ್ಥಾನದ ರಥಬೀದಿ ಸಿಮೆಂಟ್‌ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 4 ಕೋಟಿ ಅನುದಾನ ಬಿಡುಗಡೆ ಮಾಡಿರುವುದು ಸ್ವಾಗತಾರ್ಹವಾಗಿದೆ ಎಂದು ಶಾಸಕ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ.

Advertisement

ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವುದು ವಿಶೇಷ. ಜಾತ್ರಾ ಸಮಯದಲ್ಲಂತೂ ಭಕ್ತಾದಿಗಳ ಸಾಲುಸಾಲು ಚಕ್ಕಡಿಗಳು ಬರುತ್ತವೆ.  ಕ್ಷೇತ್ರಕ್ಕೆ ತೆರಳುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಮೂಲ ಸೌಕರ್ಯಗಳನ್ನು  ಅಭಿವೃದ್ಧಿಪಡಿಸಲಾಗಿದೆ. ಅಲ್ಲದೇ ಈಗ ರಥಬೀದಿ ಸಿಮೆಂಟ್‌ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು 4ಕೋಟಿ ಅನುದಾನ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಕಾರಣ ಮುಖ್ಯಮಂತ್ರಿ ಬಿ.ಎಸ್‌.  ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಶಾಸಕರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next