Advertisement

ನಾನೆಂದು ‘ತುಕ್ಡೆ ತುಕ್ಡೆ’ ಗ್ಯಾಂಗ್ ಗಳನ್ನು ಕಂಡಿರಲಿಲ್ಲ: ವಿದೇಶಾಂಗ ಸಚಿವ ಜೈಶಂಕರ್

09:52 AM Jan 08, 2020 | keerthan |

ಹೊಸದಿಲ್ಲಿ: ನಾನು ಜೆಎನ್ ಯುವಿನಲ್ಲಿ ಓದುತ್ತಿರುವಾಗ ಎಂದೂ ತುಕ್ಡೆ ತುಕ್ಡೆ ಗ್ಯಾಂಗ್ ಗಳನ್ನು ಕಂಡಿರಲಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

Advertisement

ರವಿವಾರ ದಿಲ್ಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಘರ್ಷಣೆಯನ್ನು ಖಂಡಿಸಿದ ಅವರು, ಇದು ವಿಶ್ವವಿದ್ಯಾಲಯದ ಸಂಪ್ರದಾಯ ಮತ್ತು ಸಂಸ್ಕೃತಿಗೆ ತದ್ವಿರುದ್ಧವಾಗಿದೆ ಎಂದರು.

ಸದ್ಯ ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವ ಎಸ್ ಜೈಶಂಕರ್ ಅವರು ಜೆಎನ್ ಯುವಿನಲ್ಲೇ ವಿದ್ಯಾಭ್ಯಾಸ ನಡೆಸಿದ್ದರು.

ದಿಲ್ಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಜೆ ಎನ್ ಯು ಘರ್ಷಣೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಜೈಶಂಕರ್ ಈ ಪ್ರತಿಕ್ರಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next