Advertisement

ಎಸ್‌.ಎಂ. ಕೃಷ್ಣ ಇಂದು ಬಿಜೆಪಿಗೆ

02:50 AM Mar 15, 2017 | Team Udayavani |

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರು ಬುಧವಾರ ದಿಲ್ಲಿಯಲ್ಲಿ ಬಿಜೆಪಿ ಸೇರಲಿದ್ದು, ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ರಾಜಕೀಯವಾಗಿ ಭಾರೀ ಪೆಟ್ಟು ನೀಡಲು ಬಿಜೆಪಿ ಮುಂದಾಗಿದೆ. ಈಗಾಗಲೇ ಕಾಂಗ್ರೆಸ್‌ ತೊರೆದಿರುವ ಎಸ್‌.ಎಂ. ಕೃಷ್ಣ ಅವರು ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ರಾಜ್ಯದ ಕೇಂದ್ರ ಸಚಿವರು, ಸಂಸದರು ಸೇರ್ಪಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಕಾಂಗ್ರೆಸ್‌ನಲ್ಲಿ ಸುಮಾರು 46 ವರ್ಷಗಳ ಸುದೀರ್ಘ‌ ರಾಜಕಾರಣ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next