Advertisement

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

12:54 AM May 08, 2024 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌.ಎಂ. ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Advertisement

ಅವರು ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಅವರ ಆರೋಗ್ಯ ಸುಧಾರಿಕೆ ಕಂಡಿದೆ. ಅವರು ಸ್ವಸ್ಥ ಚಿತ್ತರಾಗಿದ್ದು, ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿದ್ದಾರೆ. ಆತಂಕಪಡಲು ಕಾರಣವಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಶ್ವಾಸಕೋಶ ತಜ್ಞ ಡಾ| ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ. ಕೃಷ್ಣ ಅವರ ಆರೋಗ್ಯ ಸುಧಾರಿಸುತ್ತಿದ್ದು 3-4 ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಖರ್ಗೆ, ವಿಜಯೇಂದ್ರ ಭೇಟಿ
ಎಸ್‌.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್‌ ಕೆ.ಮುಳುಗುಂದ್‌, ಶಾಸಕರಾದ ದಿನೇಶ್‌ ಗೂಳಿಗೌಡ ಜತೆಯಲ್ಲಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೂಡ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next