Advertisement

ಕ್ಷೇತ್ರ ಪ್ರಗತಿಗೆ ಶ್ರಮಿಸಿರುವೆ, ಇನ್ನೊಮ್ಮೆ ಗೆಲ್ಲಿಸಿ: ರಘು

11:40 AM May 09, 2023 | Team Udayavani |

ಬೆಂಗಳೂರು: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದು, ಆ ಹಿನ್ನೆಲೆಯಲ್ಲಿ ಮತ್ತೂಮ್ಮೆ ಆಶೀರ್ವಾದ ಮಾಡಿ ಎಂದು ಜನತೆಯಲ್ಲಿ ಸಿ.ವಿ.ರಾಮನ್‌ ನಗರ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್‌.ರಘು ಅವರು ಮನವಿ ಮಾಡಿದರು.

Advertisement

ಸೋಮವಾರ ಕ್ಷೇತ್ರ ವ್ಯಾಪ್ತಿಯ ಬೆನ್ನಿಗಾನಹಳ್ಳಿ, ಬಿ.ಚನ್ನಸಂದ್ರ, ಚಿಕ್ಕಬಾಣಸವಾಡಿ ಸೇರಿದಂತೆ ಹಲವು ಕಡೆಗಳಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರ ಮತ್ತು ಸ್ಥಳೀಯ ಬಿಜೆಪಿ ಮುಖಂಡರ ಜತೆಗೂಡಿ ಬಿರುಸಿನ ಪ್ರಚಾರ ನಡೆಸಿದರು. ಹೋದಕಡೆ ಶಾಸಕ ರಘು ಅವರಿಗೆ ಜನರು ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಇದೇ ವೇಳೆ ಶಾಸಕರಾಗಿ ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಎಸ್‌.ರಘು ಅವರು ಜನತೆಗೆ ಮನವರಿಕೆ ಮಾಡಿಕೊಟ್ಟರು.

ಈ ವೇಳೆ ಮಾತನಾಡಿದ ಶಾಸಕ ಎಸ್‌.ರಘು, ಕ್ಷೇತ್ರದಲ್ಲಿ ಅಪಾರವಾದ ಜನ ಬೆಂಬಲ ದೊರೆಯುತ್ತಿದ್ದು, ಮತ್ತೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ಶಾಸಕನಾಗಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಜನರು ಕೂಡ ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಕೂಡ ನನ್ನ ಗೆಲುವಿಗೆ ಸಹಕಾರಿ ಆಗಲಿವೆ ಎಂದರು.

ಕ್ಷೇತ್ರದ ಜನತೆಯ ಆಶೀರ್ವಾದದಿಂದ ಮೂರು ಬಾರಿ ಆಯ್ಕೆಯಾಗಿ ಮನೆ ಮಗನಾಗಿ ಕೆಲಸ ಮಾಡಿದ್ದೇನೆ. ಸರ್ಕಾರಿ ಶಾಲೆಗಳ ಉನ್ನತೀಕರಣ, ಉದ್ಯಾನವನ, ಮೂಲಸೌಕರ್ಯ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಒಟ್ಟಾರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದ್ದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next