Advertisement

ಭೂ ಅಕ್ರಮ‌ ಮರುತನಿಖೆ ಏಕೆ? ಆಯುಕ್ತ ಮನೀಶ್ ಮೌದ್ಗಿಲ್ ವಿರುದ್ಧ ಸೋಮಶೇಖರ್ ಆಕ್ರೋಶ

12:49 PM Sep 05, 2021 | Team Udayavani |

ಮೈಸೂರು: ಮೈಸೂರು ಭೂ ಅಕ್ರಮ‌ ಮರುತನಿಖೆಯನ್ನು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆದ ನಂತರವೂ ಮತ್ತೊಂದು ತನಿಖೆ ಏಕೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಮೈಸೂರು ಭೂ ಅಕ್ರಮ‌ ಮರುತನಿಖೆಗೆ ಭೂ ದಾಖಲೆಗಳ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್ ಆದೇಶ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆದ ನಂತರವೂ ಮತ್ತೊಂದು ತನಿಖೆ ಏಕೆ..? ಐಎಎಸ್ ಅಧಿಕಾರಿಗಳು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಧಿಕಾರಿಗಳು ಆರೋಪ ಮಾಡಿದರೆ ರಾಜಕಾರಣಿಗಳು ಭ್ರಷ್ಟರು. ಅಧಿಕಾರಿಗಳ ಮೇಲೆ ಆರೋಪ ಮಾಡಿದರೆ ಅವರು ಪ್ರಾಮಾಣಿಕರಾ..ಎಂದು ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ನೆರೆ ಹಾನಿ ಪ್ರದೇಶಗಳಿಗೆ ಕೇಂದ್ರದ ತಂಡ ಭೇಟಿ: 10 ದಿನದಲ್ಲಿ ಸರ್ಕಾರಕ್ಕೆ ವರದಿ

Advertisement

Udayavani is now on Telegram. Click here to join our channel and stay updated with the latest news.

Next