Advertisement

ಅತ್ಯಾಚಾರ ಪ್ರಕರಣದ ತನಿಖೆ ತೀವ್ರಗತಿಯಲ್ಲಿದೆ: ಸಚಿವ ಎಸ್.ಟಿ. ಸೋಮಶೇಖರ್

08:40 PM Aug 27, 2021 | Team Udayavani |

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಮುಖ್ಯಮಂತ್ರಿಗಳ ಆದೇಶದಂತೆ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಸಂತ್ರಸ್ತೆಯನ್ನು ಯಾರೂ ಭೇಟಿ ಮಾಡಿಲ್ಲ. ಭೇಟಿ ಮಾಡದಂತೆ ಸಂತ್ರಸ್ತೆಯ ಪೋಷಕರು ಪತ್ರ ನೀಡಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

Advertisement

ಶುಕ್ರವಾರ, ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಚಾಮರಾಜನಗರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ಮೂರು ದಿನಗಳಿಂದ ಪ್ರಕರಣದ ಕುರಿತು ತೀವ್ರ ತನಿಖೆ ಮಾಡಲಾಗುತ್ತಿದೆ. ಆರೋಪಿಗಳ ಪತ್ತೆಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಒಬ್ಬರಿಗೆ ಐದು ಕೆಜಿ ಅಕ್ಕಿ ಸಾಕು ಎಂಬ ಆಹಾರ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವರು ಹೇಳಿದ್ದೆಲ್ಲ ನಡೆಯೋದಿಲ್ಲ.ಯಾರಿಗೆ ಎಷ್ಟು ಕೆಜಿ ಅಕ್ಕಿ ಕೊಡ ಬೇಕು ಎಂಬುದು ಕ್ಯಾಬಿನೆಟ್ ನಲ್ಲಿ ನಿರ್ಧಾರವಾಗುತ್ತದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಹತ್ತು ಕೆಜಿ ಅಕ್ಕಿ ನೀಡಿದ್ದರು. ಈಗ ಸ್ವಲ್ಪ ಕಡಿಮೆ ಮಾಡಲಾಗಿದೆ. ಹೆಚ್ಚಳ ಮಾಡ ಬೇಕು ಎಂದರೆ ಕ್ಯಾಬಿನೆಟ್ ನಲ್ಲಿಯೇ ನಿರ್ಧಾರ ಆಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next