Advertisement

ದಿನೇಶ್ ಗುಂಡೂರಾವ್ ಅಯೋಗ್ಯ, ಸಿದ್ದರಾಮಯ್ಯನ ಚೇಲಾ: ಎಸ್ ಟಿ ಸೋಮಶೇಖರ್

08:38 AM Sep 28, 2019 | Team Udayavani |

 

Advertisement

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅನರ್ಹ ಶಾಸಕ ಸೋಮಶೇಖರ್ ಫುಲ್ ಗರಂ ಆಗಿದ್ದು, ದಿನೇಶ್ ಗುಂಡೂರಾವ್ ಅಯೋಗ್ಯ ಎಂದಿದ್ದಾರೆ.

ಬೆಂಗಳೂರಿನಲ್ಲಿ ಇಂದು ದಿನೇಶ್ ಗುಂಡೂರಾವ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ಮಾಡಿದ ಸೋಮಶೇಖರ್, ದಿನೇಶ್ ಗುಂಡೂರಾವ್ ಅಯೋಗ್ಯ. ಸಿದ್ದರಾಮಯ್ಯನ ಚೇಲಾ ಅವನು ಎಂದಿದ್ದಾರೆ.

ಸಿದ್ದರಾಮಯ್ಯನವರದ್ದು ಕಾಂಗ್ರೆಸ್ ಪಕ್ಷವೋ ಅಥವಾ ಮೂಲ ಕಾಂಗ್ರೆಸ್ ಪಕ್ಷವೋ? ಎಂದು ಪ್ರಶ್ನಿಸಿದ ಅವರು,  ಪದೇ ಪದೇ ಅನರ್ಹರ ಬಗ್ಗೆ ಮಾತಾಡೋದು ಬೇಡ. ಪಕ್ಷ ವಿರೋಧಿಗಳನ್ನು ಇಟ್ಟುಕೊಂಡು ಸಭೆ ಮಾಡ್ತೀರಿ. ಹಿರಿಯ ಕಾಂಗ್ರೆಸ್ ನಾಯಕರನ್ನು ಕಣೆಗಣಿಸುತ್ತೀರಿ. ನಿನ್ನೆಯ ಸಭೆಯಲ್ಲಿ ಕೆ.ಎಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್ ಪ್ರಶ್ನೆ ಮಾಡಿದ್ದರಲ್ಲಿ ಯಾವ ತಪ್ಪಿದೆ? ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆಯಲ್ಲಿ ಆರ್ ರಮೇಶದ ಕುಮಾರ್ ತಮ್ಮ ವಿರುದ್ಧ ಕೆಲಸ ಮಾಡಿ ಸೋಲಿಗೆ ಕಾರಣರಾಗಿದ್ದರು ಎಂದು ಕೆ ಎಚ್ ಮುನಿಯಪ್ಪ ಚುನಾವಣಾ ಸಮಿತಿ ಸಭೆಯಲ್ಲಿ ನೇರ ಆರೋಪ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next