Advertisement

ಕೋವಿಡ್ ಯೋಧರ ಮೇಲಿನ ಹಲ್ಲೆಕೋರರ ಶಿಕ್ಷಿಸುವ ಕಾನೂನಿಗೆ ಇಂದೇ ಸುಗ್ರೀವಾಜ್ಞೆ

10:02 AM Apr 22, 2020 | keerthan |

ಮೈಸೂರು: ರಾಜ್ಯದಲ್ಲಿ ಕೋವಿಡ್ -19 ಶಂಕಿತರ ಚಿಕಿತ್ಸೆಗೆಂದು ಹೋದಾಗ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಉತ್ತರ ಪ್ರದೇಶದ ಕಾನೂನಿನಂತೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ನಿಲುವು ತೆಗೆದುಕೊಳ್ಳುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಇಂದೇ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

Advertisement

ಅಲ್ಲಿಯ ಕಾನೂನಿಗಿಂತಲೂ ಹೆಚ್ಚಿನ ಕಠಿಣ ಕ್ರಮಗಳಿದ್ದರೆ ಸೇರಿಸಿ ಸುಗ್ರೀವಾಜ್ಞೆ ಯೊಂದಿಗೆ ಬಿಗಿ ಕಾನೂನಿನ ಆದೇಶ ಹೊರಬೀಳಲಿದೆ. ಬಳಿಕ ಹಲ್ಲೆಕೋರರ ಬಂಧಿಸಿ ಅವರನ್ನು ಜೈಲಿಗಟ್ಟಲಾಗುವುದು ಎಂದು ಸಚಿವರು ತಿಳಿಸಿದರು.

ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದೆ. ಇನ್ನು ಇಂತಹ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಇಂತಹ ಘಟನೆಯನ್ನು ನಾನು ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು.

ಮೈಸೂರಿನಲ್ಲಿ 1561 ಮಂದಿಯನ್ನು ಈಗಾಗಲೇ ಪರೀಕ್ಷೆ ಮಾಡಲಾಗಿದೆ. ಇನ್ನೂ ಪರೀಕ್ಷೆಗಳು ನಡೆಯುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next