Advertisement

ಪಕ್ಷಕ್ಕೆ ಯಾರೂ ಮುಖ್ಯವಲ್ಲ, ನಮಗೆ ಪಕ್ಷ ಮುಖ್ಯವಾಗಿದೆ: ಸಾ.ರಾ.ಮಹೇಶ್

02:30 PM Feb 13, 2022 | Team Udayavani |

ಮೈಸೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಸಂಬಂಧಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಸಾ.ರಾ.ಮಹೇಶ್, “ ಕುಮಾರಸ್ವಾಮಿಯವರು ಮೈಸೂರಿಗೆ ಆಗಮಿಸಿದ್ದಾಗ ಚಾಮುಂಡೇಶ್ವರಿಗೆ ಮುಂದೆ ಯಾರು ಅಭ್ಯರ್ಥಿ ಎಂದು ಕಾರ್ಯಕರ್ತರು ಕೇಳಿದಾಗ ನಾನೇ ಇದೀನಲ್ಲ ನಡೀರಪ್ಪ ಎಂದಿದ್ದಾರೆ. ಆದರೆ ಚಾಮುಂಡೇಶ್ವರಿಯಲ್ಲಿ ನಮ್ಮ ಪಕ್ಷದ ಶಾಸಕರೇ ಇದ್ದಾರೆ. ಹೆಚ್ ಡಿ ಕುಮಾರಸ್ವಾಮಿಯವರ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

Advertisement

ಶಾಸಕ ಜಿ ಟಿ ದೇವೇಗೌಡ ಇನ್ನೂ ಜೆಡಿಎಸ್ ನಲ್ಲೇ ಇದ್ದಾರೆ.‌ ಅವರೆಂದೂ ಜೆಡಿಎಸ್ ಬಿಡುತ್ತೇನೆಂದು ಹೇಳಿಲ್ಲ. ನಮ್ಮಲ್ಲಿ ಕೆಲ ಸಣ್ಣಪುಟ್ಟ ವ್ಯತ್ಯಾಸಗಳಿವೆ. ಪಕ್ಷದ ವರಿಷ್ಠ ನಾಯಕರು ಇದನ್ನು ಸರಿಪಡಿಸಲಿದ್ದಾರೆ. ಪಕ್ಷಕ್ಕೆ ಯಾರೂ ಮುಖ್ಯವಲ್ಲ, ನಮಗೆ ಪಕ್ಷ ಮುಖ್ಯವಾಗಿದೆ ಎಂದು ಸಾ.ರಾ ಮಹೇಶ್ ಹೇಳಿದರು.

ಇದನ್ನೂ ಓದಿ:ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಗೊಂದಲ: ಸ್ಪಷ್ಟನೆ ನೀಡಿದ ಎಚ್ ಡಿಕೆ

Advertisement

Udayavani is now on Telegram. Click here to join our channel and stay updated with the latest news.

Next