Advertisement

“ಬಫೂನ್, ಭಿಕ್ಷುಕ, ಹರಕುಬಾಯಿ…”ವಿಶ್ವನಾಥ್ ವಿರುದ್ಧ ಸಾ.ರಾ.ಮಹೇಶ್ ಟೀಕಾ ಪ್ರಹಾರ

12:15 PM Jan 08, 2021 | Team Udayavani |

ಬೆಂಗಳೂರು: ಮಾಜಿ ಸಚಿವರುಗಳಾದ ಸಾ.ರಾ.ಮಹೇಶ್ ಮತ್ತು ಎಚ್.ವಿಶ್ವನಾಥ್ ಆರೋಪ – ಪ್ರತ್ಯಾರೋಪಗಳ ಸರಣಿ ಮುಂದುವರಿದಿದೆ. ಎಚ್.ವಿಶ್ವನಾಥ್ ಅವರನ್ನು “ಬಫೂನ್, ಭಿಕ್ಷುಕ, ಹರಕುಬಾಯಿ” ಎಂದೆಲ್ಲಾ ಟೀಕಿಸಿರುವ ಸಾ.ರಾ.ಮಹೇಶ್ ‘ಬೊಂಬಾಯಿ ಮಿಠಾಯಿ ವಿಶ್ವನಾಥ್’ ಎಂದು ವ್ಯಂಗ್ಯವಾಡಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಸಾ.ರಾ.ಮಹೇಶ್, ‘ಬೊಂಬಾಯಿ ಮಿಠಾಯಿ ವಿಶ್ವನಾಥ್’ ಅವರ ನಾಲಿಗೆಗೆ ಇನ್ನೊಬ್ಬರನ್ನು ವ್ಯಕ್ತಿಗತವಾಗಿ ಜರಿಯುವ ಹಕ್ಕಾದರೂ ಇದೆಯಾ? ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎಂದು ಜರೆದಿದ್ದಾರೆ.

ಬೌದ್ಧಿಕ ದಿವಾಳಿತನಕ್ಕೆ ತುತ್ತಾದವರು ಮಾತ್ರ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವ್ಯಕ್ತಿಗತ ಲೇವಡಿಗಿಳಿಯುತ್ತಾರೆ. ಅವರು ಎಂದೋ ಬಫೂನ್‌ ಆಗಿರುವುದನ್ನು ಮರೆತಿರುತ್ತಾರೆ. ಬೊಂಬಾಯಿ ಮಿಠಾಯಿ ರುಚಿ ಸವಿದಿದ್ದು ಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ವಿಶ್ವನಾಥ್ ರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ:ಮೂರು ಕೃಷಿ ಕಾಯ್ದೆ ರದ್ದುಪಡಿಸುವ ಪ್ರಶ್ನೆಯೇ ಇಲ್ಲ: ರೈತರ ಜತೆಗಿನ ಮಾತುಕತೆಗೆ ಮುನ್ನ ಕೇಂದ್ರ

ತಾನು ಘನವಾಗದೆ ಘನವೇನು ಬಂತು. ಹರುಕುಬಾಯಿ, ಕೊಳೆತ ಮೆದುಳು ಮಂತ್ರಿಗಿರಿಯ ಘನತೆಗೆ ಊಳಿಡುತಿದೆ. ಎಂದೋ ಭಿಕ್ಷುಕನಾಗಿರುವ ವಿಶ್ವನಾಥ್ ಎರಡು ಬಾರಿ ಮುಖ್ಯಮಂತ್ರಿಯಾದವರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳದಿದ್ದರೆ ತಕ್ಕಶಾಸ್ತಿ ಮಾಡಬೇಕಾಗುತ್ತದೆ ಎಚ್ಚರ ಎಂದು ಎಚ್ ಡಿಕೆ ವಿರುದ್ಧದ ಟೀಕೆಗಳಿಗೆ ಸಾ.ರಾ.ಮಹೇಶ್ ಪ್ರತ್ಯುತ್ತರ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next