Advertisement

ಮೊದಲ ಏಕದಿನ: ವೆಂಕಟೇಶ್ ಅಯ್ಯರ್‌ ಪಾದಾರ್ಪಣೆ ; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ

03:08 PM Jan 19, 2022 | Team Udayavani |

ಪಾರ್ಲ್: ಪ್ರವಾಸಿ ಭಾರತ ತಂಡದ ವಿರುದ್ಧ ಬುಧವಾರ ಇಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

Advertisement

ಭಾರತ ತಂಡದ ಪರ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್‌ ಪಾದಾರ್ಪಣ ಪಂದ್ಯವನ್ನು ಆಡುತ್ತಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಮಿಂಚಿದ ಎಡಗೈ ವೇಗಿ ಮಾರ್ಕೊ ಜಾನ್ಸೆನ್ ದಕ್ಷಿಣ ಆಫ್ರಿಕಾ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ.

15 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ. ಜಾನ್ನೆಮನ್ ಮಲನ್ 6 ರನ್ ಗಳಿಸಿ ಬುಮ್ರಾ ಗೆ ವಿಕೆಟ್ ಒಪ್ಪಿಸಿದರು. ಕ್ವಿಂಟನ್ ಡಿ ಕಾಕ್ 27 ಮತ್ತು ನಾಯಕ  ಟೆಂಬಾ ಬವುಮಾ 17 ರನ್ ಗಳಿಸಿ ಆಟವಾಡುತ್ತಿದ್ದಾರೆ.

ಭಾರತ: ಕೆಎಲ್ ರಾಹುಲ್ (ನಾಯಕ ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿ.ಕೀ), ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್.

Advertisement

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ )ಕ್ವಿಂಟನ್ ಡಿ ಕಾಕ್ (ವಿ.ಕೀ), ಜಾನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, , ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಲುಂಗಿ ಎನ್‌ಗಿಡಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next