Advertisement

ಸಬ್ ಕೆ ಸಬ್ ಚೋರ್ ಹೇ, ಭ್ರಷ್ಟಾಚಾರಿ ಜನತಾ ಪಾರ್ಟಿ: ರಮ್ಯಾ ಗುಡುಗು

11:46 AM Mar 22, 2019 | Team Udayavani |

ಹೊಸದಿಲ್ಲಿ: ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸ್ವಪಕ್ಷದ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿಗಳ ಬೃಹತ್ ಕಪ್ಪ ನೀಡಿದ್ದಾರೆಂಬ ಕಾಂಗ್ರೆಸ್ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಜಿ ಸಂಸದೆ ರಮ್ಯಾ ಟ್ವೀಟ್  ಮಾಡಿ  ಬಿಜೆಪಿಯನ್ನು ‘ಸಬ್ ಕೆ ಸಬ್ ಚೋರ್ ಹೈ’ ಭ್ರಷ್ಟಾಚಾರಿ ಜನತಾ ಪಾರ್ಟಿ ಎಂದು ಲೇವಡಿ ಮಾಡಿದ್ದಾರೆ. 

Advertisement

‘ದಿ ಕಾರವನ್’ ಪತ್ರಿಕೆ ಬಿಡುಗಡೆ ಮಾಡಿದ ಡೈರಿಯಲ್ಲಿ ಯಡಿಯೂರಪ್ಪನವರು ಕೇಂದ್ರ ಬಿಜೆಪಿ ನಾಯಕರಿಗೆ ಕೋಟಿಗಳಲ್ಲಿ ಕೊಟ್ಟಿರುವ ಹಣದ ಬಗ್ಗೆ ಉಲ್ಲೇಖಿಸಲಾಗಿದೆ. ಇದನ್ನು ಟ್ವೀಟ್  ಮಾಡಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ, ‘ ಈ ಎಲ್ಲಾ ಹಣ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಅಮಿತ್ ಶಾ ಅವರಿಗೆ ಹೋಗುತ್ತದೆ ಎಂದು ಬರೆದಿದ್ದಾರೆ. ಇದರೊಂದಿಗೆ ಬಿಜೆಪಿಗೆ ಭಾರತೀಯ ಜನತಾ ಪಾರ್ಟಿ ಗೆ ಭ್ರಷ್ಟಾಚಾರಿ ಜನತಾ ಪಾರ್ಟಿ ಎಂದು ಬರೆದು ಕಾಲೆಳಿದಿದ್ದಾರೆ. 

ಕೇಂದ್ರ ನಾಯಕರಿಗೆ ಹಣ ನೀಡಿರುವ ಬಗ್ಗೆ ವಿವರಗಳ ಜೊತೆ ಯಡಿಯೂರಪ್ಪ ಅವರ ಸಹಿಯುಳ್ಳ ಡೈರಿಯನ್ನು ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜೀವಾಲ ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆಗೊಳಿಸಿದರು.   

Advertisement

Udayavani is now on Telegram. Click here to join our channel and stay updated with the latest news.

Next