Advertisement

Sabarimala:ಕುಂದಾಪುರದ ವ್ಯಕ್ತಿಗೆ ಹೃದಯಾಘಾತ; ಸಾವು

12:41 AM Jan 16, 2024 | Team Udayavani |

ಕುಂದಾಪುರ: ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಿಸಲು ತೆರಳಿದ್ದ ಅಯ್ಯಪ್ಪ ವ್ರತಧಾರಿ ಶಬರಿಮಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.

Advertisement

ಕುಂದಾಪುರ ಪುರಸಭೆ ವ್ಯಾಪ್ತಿಯ ಮದ್ದುಗುಡ್ಡೆ ನಾಗರಾಜ್‌ ಖಾರ್ವಿ (38) ಮೃತರು. ನಾಗರಾಜ್‌ ಹಾಗೂ ತಂಡ ಜ. 15ರಂದು ಮಕರ ಜ್ಯೋತಿ ದರ್ಶನ ಪಡೆಯುವ ಸಲುವಾಗಿ ತೆರಳಿದ್ದರು. ಆದರೆ ಶಬರಿಮಲೆಯಲ್ಲಿ ಇದ್ದಕ್ಕಿದ್ದಂತೆ ನಾಗರಾಜ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ಅತೀ ಹೆಚ್ಚು ಸಂಖ್ಯೆಯಲ್ಲಿ ಅಯ್ಯಪ್ಪ ವ್ರತಧಾರಿಗಳು ಇದ್ದಿದ್ದರಿಂದ ತತ್‌ಕ್ಷಣ ಚಿಕಿತ್ಸೆ ನೀಡಲು ಅಥವಾ ವೈದ್ಯರನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಾಗರಾಜ್‌ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next