Advertisement

17ರಿಂದ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ

10:30 PM Sep 08, 2021 | Team Udayavani |

ತಿರುವನಂತಪುರಂ: ಪ್ರಸಿದ್ಧ ಶಬರಿ ಮಲೆ ಅಯ್ಯಪ್ಪ ದೇಗುಲ ಇದೇ ತಿಂಗಳು 17ನೇ ತಾರೀಕಿನಿಂದ ಐದು ದಿನಗಳ ಕಾಲ ತೆರೆಯಲಿದೆ.

Advertisement

ಮೊದಲೇ ಬುಕ್ಕಿಂಗ್‌ ಮಾಡಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.

ಟಿಡಿಬಿ ಅಧಿಕೃತ ವೆಬ್‌ಸೈಟ್‌ ಮೂಲಕ ಭಕ್ತಾದಿಗಳು ದೇವರ ದರ್ಶನಕ್ಕೆ ಬುಕ್ಕಿಂಗ್‌ ಮಾಡಿಕೊಳ್ಳಬಹುದು. ಪ್ರತಿದಿನ 15 ಸಾವಿರ ಭಕ್ತಾದಿಗಳಿಗೆ ಮಾತ್ರ ಅವಕಾಶವಿರಲಿದೆ.

ಎರಡು ಡೋಸ್‌ ಲಸಿಕೆ ಪಡೆದವರು ಅಥವಾ ದೇವಸ್ಥಾನಕ್ಕೆ ಭೇಟಿ ಸಮಯದಲ್ಲಿ ಮಾಡಿಸಿಕೊಂಡಿರುವ ಆರ್‌ಟಿಪಿಸಿಆರ್‌ ಪರೀಕ್ಷೆಯ ವರದಿ ಇರುವವರಿಗೆ ಮಾತ್ರವೇ ದೇವರ ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಡಿಕೆಶಿ ಆಗ್ರಹ

Advertisement
Advertisement

Udayavani is now on Telegram. Click here to join our channel and stay updated with the latest news.

Next