Advertisement

25ನೇ ಶಬರಿಮಲೆ ಯಾತ್ರೆ: ಶೇಖರ್‌ ಸ್ವಾಮಿಗೆ ಅಭಿನಂದನೆ

11:01 AM Jan 04, 2022 | Team Udayavani |

ಪುಣೆ: ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಟ್ರಸ್ಟಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಶೇಖರ ಸ್ವಾಮಿ ಅವರು 25ನೇ ವರ್ಷದ ಶಬರಿಮಲೆ ಯಾತ್ರೆ ಕೈಗೊಂಡಿದ್ದು, ಅವರನ್ನು ಜ. 1ರಂದು ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆ ಸಂದರ್ಭ ಗೌರವಿಸಲಾಯಿತು.

Advertisement

ಪುಣೆಯ ಉದ್ಯಮಿ ಶೇಖರ್‌ ಸ್ವಾಮಿಯವರು ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸ್ಥಾಪನೆ, ಅಭಿವದ್ಧಿ  ಕಾರ್ಯಗಳಲ್ಲಿ  ಮಹತ್ತರ ಕೆಲಸ ಮಾಡಿದ್ದು, ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ ದ್ದಾರೆ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾಗಿರುವ ಅವರು ವ್ರತಧಾರಿ ಯಾಗಿ ಶಬರಿಮಲೆ ಯಾತ್ರೆಯನ್ನು ನಿರಂತರವಾಗಿ ಕೈಗೊಳ್ಳುತ್ತಿದ್ದಾರೆ.

ಅವರನ್ನು ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ  ನಡೆದ ಭಜನೆ, ಪಡಿಪೂಜೆಯ ಸಂದರ್ಭ ಪ್ರಭಾಕರ ಗುರುಸ್ವಾಮಿ, ಭಾಸ್ಕರ್‌ ಗುರುಸ್ವಾಮಿ ಮತ್ತು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಸೇರಿ ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಅಭಿನಂದಿಸಿ ಶುಭ ಹಾರೈಸಿದರು. ಕಾತ್ರಜ್‌ ಶ್ರೀ ಅಯ್ಯಪ್ಪ  ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುಭಾಶ್‌ ಶೆಟ್ಟಿ ಉಪಸ್ಥಿತರಿದ್ದರು.

-ವರದಿ: ಹರೀಶ್‌ ಮೂಡಬಿದ್ರೆ ಪುಣೆ

Advertisement

Udayavani is now on Telegram. Click here to join our channel and stay updated with the latest news.

Next