Advertisement
ಇದರಂಗವಾಗಿ ಬುಧವಾರ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಿತು.ಕಾಸರಗೋಡು ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿಯನ್ನು ಬಾಲಕೃಷ್ಣನ್ ನಂಬ್ಯಾರ್ ಉದ್ಘಾಟಿಸಿದರು. ಉಪ್ಪಳ ರಾಷ್ಟ್ರೀಯ ಹೆದ್ದಾರಿ ಯಲ್ಲಿ ನಡೆದ ರಸ್ತೆ ತಡೆಯನ್ನು ವೀರಪ್ಪ ಅಂಬಾರು ಉದ್ಘಾಟಿಸಿದರು.
ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ಮಧ್ಯೆ ರಾಜ್ಯಾದ್ಯಂತ ರಸ್ತೆ ತಡೆ ಚಳವಳಿ ನಡೆಯಿತು. ಮಹಿಳೆಯರ ಸಹಿತ ನೂರಾರು ಮಂದಿ ರಸ್ತೆ ತಡೆ ಚಳವಳಿಯಲ್ಲಿ ಭಾಗವಹಿಸಿದರು. ದೇಗುಲಕ್ಕೆ ಎಲ್ಲ ವಯೋಮಿತಿಯ ಮಹಿಳೆಯರಿಗೆ ಪ್ರವೇಶಾವಕಾಶ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಲು ಯತ್ನಿಸುತ್ತಿರುವ ರಾಜ್ಯ ಸರಕಾರದ ನೀತಿಯನ್ನು ಪ್ರತಿಭಟಿಸಿ ಕಾಸರಗೋಡು ಜಿಲ್ಲೆ ಸಹಿತ ರಾಜ್ಯದ ಇನ್ನೂರು ಕೇಂದ್ರಗಳಲ್ಲಿ ವಿವಿಧ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ರಸ್ತೆ ತಡೆ ಚಳವಳಿ ನಡೆಯಿತು.
Related Articles
Advertisement