Advertisement

ಅಕ್ರಮ ಆರೋಪ ಸಾಬೀತಾದ್ರೆ ರಾಜೀನಾಮೆ: ಲಕ್ಷ್ಮೀ ಹೆಬ್ಟಾಳ್ಕರ್‌

03:45 AM Jan 27, 2017 | |

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ತಾವು ಅಕ್ರಮ ಸಂಪತ್ತು ಗಳಿಸಿರುವುದು ಸಾಬೀತಾರೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ರಾಜ್ಯ ಮಹಿಳಾ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಸವಾಲು ಹಾಕಿದ್ದಾರೆ.

Advertisement

ಸೋಲಾರ್‌ ಘಟಕ ಸ್ಥಾಪನೆ ವಿಷಯದಲ್ಲಿ ಅವ್ಯವಹಾರ ಆಗಿದೆ ಎಂದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ನನ್ನ ವಿರುದ್ಧ 40 ಕೋಟಿ ರೂಪಾಯಿ ಅವ್ಯವಹಾರದ ಆರೋಪ ಮಾಡಿದ್ದಾರೆ. ಸೌರ ವಿದ್ಯುತ್‌ ಯೋಜನೆಯನ್ನು ನ್ಯಾಯಯುವತಾಗಿಯೇ ಪಡೆದುಕೊಂಡಿದ್ದೇನೆ. ಇದರಲ್ಲಿ ಅಕ್ರಮ ನಡೆದಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.

ನಮ್ಮ ಮನೆಯ ಮೇಲೆ ಐಟಿ ದಾಳಿಯಾಗಿದ್ದು ನಿಜ. ಐಟಿ ಅಧಿಕಾರಿಗಳು ಕೇಳಿದ ದಾಖಲೆಗಳನ್ನು ನೀಡಿದ್ದೇವೆ. ಯಾವುದೇ ಅಕ್ರಮದಲ್ಲಿ ನಾನಾಗಲೀ, ನಮ್ಮ ಕುಟುಂಬದವರಾಗಲೀ ಭಾಗಿಯಾಗಿಲ್ಲ. ಆದಾಯ ತೆರಿಗೆ ಇಲಾಖೆಯ ವಿಚಾರಣೆ ಮುಗಿದ ಬಳಿಕ ಎಲ್ಲ ವಿವರ ನೀಡುತ್ತೇನೆ ಎಂದರು.

ಬಿಜೆಪಿ ಶಾಸಕ ಸಂಜಯ್‌ ಪಾಟೀಲ್‌ ಆಗಾಗ ವಾಮಮಾರ್ಗ ಹಿಡಿಯುತ್ತಾರೆ. ಮುಂದಿನ ಚುನಾವಣೆಯ ಸೋಲಿನ ಭಯದಿಂದ ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅವರೇ ತಮ್ಮ ಹಿಂಬಾಲಕರ ಮೂಲಕ ತಮ್ಮ ಮನೆಯ ಮೇಲೆ ಕಲ್ಲು ಹೊಡೆಸಿ ತನ್ನ ತಮ್ಮನ ಮೇಲೆ ಆರೋಪ ಹೊರಿಸಿದ್ದಾರೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next