Advertisement

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

06:35 PM Oct 25, 2024 | Team Udayavani |

ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಡಿವೈಎಫ್‌ಐ ಮಾಜಿ ನೇತಾರೆ, ಅಧ್ಯಾಪಿಕೆ ಶೇಣಿ ಬಲ್ತಕಲ್ಲುವಿನ ಸಚಿತಾ ರೈ(27) ಯನ್ನು ಕಣ್ಣೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ. ಈಕೆಯ ಜತೆಗೆ ಕೆಲವೇ ತಿಂಗಳು ಪ್ರಾಯದ ಮಗು ಕೂಡಾ ಇದೆ.

Advertisement

ಬಂಧಿತ ಆರೋಪಿಯನ್ನು ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್‌ (ಪ್ರಥಮ) ವಸತಿಯಲ್ಲಿ ಹಾಜರುಪಡಿಸಿದಾಗ ರಿಮಾಂಡ್‌ ವಿಧಿಸಿ, ಕಣ್ಣೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲು ಮೆಜಿಸ್ಟ್ರೇಟ್‌ ಆದೇಶಿಸಿದ್ದರು. ಅದರಂತೆ ಕಣ್ಣೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ.

ಹಲವರಿಂದ ಪಡೆದುಕೊಂಡ ಒಟ್ಟು 78 ಲಕ್ಷ ರೂ. ಕುಂಜಾರು ನಿವಾಸಿ ಚಂದ್ರಶೇಖರನಿಗೆ ಹಸ್ತಾಂತರಿಸಿದ್ದಾಗಿ ಸಚಿತಾ ರೈ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಹಣ ನೀಡಿರುವುದರ ಪುರಾವೆಯಾಗಿ 78 ಲಕ್ಷ ರೂ.ಗಳ ಚೆಕ್‌ ನೀಡಿರುವುದಾಗಿಯೂ ಅದು ತನ್ನ ಕೈವಶವಿದೆ ಎಂದು ಸಚಿತಾ ರೈ ಹೇಳಿದ್ದಾಳೆ. ಅ.24 ರಂದು ರಾತ್ರಿ 11 ಗಂಟೆಗೆ ಮೆಜಿಸ್ಟ್ರೇಟ್‌ ವಸತಿಯಲ್ಲಿ ಹಾಜರುಪಡಿಸಿದ್ದು, ತಡ ರಾತ್ರಿಯಾದುದರಿಂದ ಕಾಂಞಂಗಾಡ್‌ನ‌ಲ್ಲಿರುವ ಜಿಲ್ಲಾ ಜೈಲಿಗೆ ಕಳುಹಿಸಲಾಗಿತ್ತು. ಅ.25 ರಂದು ಬೆಳಗ್ಗೆ ಕಣ್ಣೂರು ಸೆಂಟ್ರಲ್‌ ಜೈಲಿಗೆ ಕೊಂಡೊಯ್ಯಲಾಯಿತು. ಈಕೆಯ ವಿರುದ್ಧ ವಿವಿಧ ಠಾಣೆಗಳಲ್ಲಾಗಿ ಡಜನ್‌ನಷ್ಟು ಕೇಸುಗಳು ದಾಖಲಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next