Advertisement

ಕೊಲೆ ಬೆದರಿಕೆ ಆರೋಪ ಹೊತ್ತಿರುವ ಆನಂದ್ ಸಿಂಗ್ ರನ್ನು ಸಚಿವ ಸ್ಥಾನದಿಂದ ವಜಾ ಮಾಡಿ: ಉಗ್ರಪ್ಪ

01:00 PM Sep 02, 2022 | Team Udayavani |

ಬೆಂಗಳೂರು: ವಿಜಯನಗರದಲ್ಲಿ ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ವಿರುದ್ದ ಪ್ರಕರಣ ದಾಖಲಾಗಿದೆ. ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರುವುದನ್ನು ಪ್ರಶ್ನಿಸಿರುವ ಎಸ್ಸಿ, ಎಸ್ಟಿ ಕುಟುಂಬದವರ ಮೇಲೆ ಕೊಲೆ ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಆನಂದ್ ಸಿಂಗ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಳ್ಳಾರಿಯ ರಿಪಬ್ಲಿಕ್ ಛಿದ್ರವಾದ ಮೇಲೆ ವಿಜಯನಗರದಲ್ಲಿ ಇದು ಶುರುವಾಗಿದೆ. ರಾಜಕಾಲುವೆ ಒತ್ತುವರಿ ಮಾಡಿದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ದಾಖಲೆ ನೀಡಿದ ಕುಟುಂಬದ ಮೇಲೆ ಟಾರ್ಚರ್ ನೀಡಲಾಗುತ್ತಿದೆ. ಕೂಡಲೇ ಆನಂದ್ ಸಿಂಗ್ ಅವರನ್ನು ದಸ್ತಗಿರಿ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಆರ್‌ಎಸ್‌ಎಸ್ ಕುರಿತು ಮಮತಾ ಹೇಳಿಕೆ: ವಿಪಕ್ಷಗಳಿಂದ ವ್ಯಾಪಕ ಟೀಕೆ

ಈ ಹಿಂದೆ ನಾವು ಉತ್ತರ ಪ್ರದೇಶದಲ್ಲಿ ಇಂತಹ ಘಟನೆ ನೋಡುತ್ತಿದ್ದೇವು.ಈಗ ಉತ್ತರ ಪ್ರದೇಶ ಮಾದರಿ ರಾಜ್ಯಕ್ಕೂ ವ್ಯಾಪಿಸಿದೆ. ದೇಶದ ರಕ್ಷಣೆ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಈ ಘಟನೆ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next