Advertisement

Karnataka: ಸದಾಶಿವ ಆಯೋಗದ ವರದಿ ಶೀಘ್ರವೇ ಜಾರಿ: ಮುನಿಯಪ್ಪ

11:10 PM Sep 10, 2023 | Team Udayavani |

ಹೊಸದುರ್ಗ: ಈ ಹಿಂದೆ ಕಾಂಗ್ರೆಸ್‌ ಸರಕಾರ ಇದ್ದಾಗ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲುತೀರ್ಮಾನಿಸಲಾಗಿತ್ತು. ಚುನಾವಣೆ ಎದುರಾಗಿದ್ದರಿಂದ ಮಾಡಲಾಗಿಲ್ಲ. ಆದಷ್ಟು ಶೀಘ್ರದಲ್ಲಿ ಈ ವರದಿಯನ್ನು ಜಾರಿಗೆ ತರಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

Advertisement

ಅಭಿನಂದನಾ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಸಂಪುಟ ಸಹೋದ್ಯೋಗಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ವರದಿ ಜಾರಿಯಾದರೆ ಭೋವಿ, ಕೊರಮ, ಕೊರಚ, ಲಂಬಾಣಿ ಹಾಗೂ ಇನ್ನಿತರ ಜನಾಂಗಗಳಿಗೆ ಮೋಸ ಮಾಡಿದಂತಾಗುತ್ತದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಎಲ್ಲ ಸಮುದಾಯಗಳ ಸ್ಥಿತಿಗತಿ ಮತ್ತು ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಸದಾಶಿವ ಆಯೋಗದ ವರದಿ ಜಾರಿ ಮಾಡಿಯೇ ತೀರುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next