Advertisement

ಸಾಧನಾ ಸಮಾವೇಶ ವೆಚ್ಚ : ಹೈಕೋರ್ಟ್‌ಗೆ ಪಿಐಎಲ್‌

07:00 AM Jan 14, 2018 | |

ಚಿಕ್ಕಮಗಳೂರು: ಸರಕಾರಿ ಹಣದಲ್ಲಿ ಸಾಧನಾ ಸಮಾವೇಶ ಆಯೋಜಿಸಿ ಅದನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿಕೊಂಡ ಹಿನ್ನೆಲೆಯಲ್ಲಿ ಅದಕ್ಕೆ ಖರ್ಚಾಗಿರುವ ಹಣ ವಸೂಲಿ ಮಾಡುವಂತೆ ಒತ್ತಾಯಿಸಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

Advertisement

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಹೆಸರಿನಲ್ಲಿ ನಡೆದ ಸಾಧನಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಕಾರ್ಯಕ್ರಮವಾಗಿ ಬಳಸಿಕೊಂಡರು. ಎಲ್ಲೆಡೆ ನಡೆದ ಸಮಾವೇಶನ್ನು ಬಿಜೆಪಿ ಹಾಗೂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಟೀಕಿಸಲು ಬಳಸಿಕೊಂಡರು. ಈ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಖರ್ಚಾಗಿರುವ ಹಣವನ್ನು ಕಾಂಗ್ರೆಸ್‌ ಪಕ್ಷದಿಂದಾಗಲಿ ಅಥವಾ ಸಿದ್ದರಾಮಯ್ಯ ಅವರ ಕಿಸೆಯಿಂದಾಗಲಿ ವಸೂಲಿ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next