Advertisement

Sadhguru ಜಗ್ಗಿ ವಾಸುದೇವ್ ಮೆದುಳಿನಲ್ಲಿ ತೀವ್ರ ರಕ್ತಸ್ರಾವ: ತುರ್ತು ಶಸ್ತ್ರಚಿಕಿತ್ಸೆ

08:38 PM Mar 20, 2024 | Team Udayavani |

ಹೊಸದಿಲ್ಲಿ: ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು  ತೀವ್ರ ಅನಾರೋಗ್ಯಕ್ಕೆ ಗುರಿಯಾಗಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

Advertisement

ಸದ್ಗುರು ಜಗ್ಗಿ ವಾಸುದೇವ್ ಅವರ ಸಾಮಾಜಿಕ ಮಾಧ್ಯಮದಲ್ಲಿ ಈ ವಿಚಾರವನ್ನು ಪ್ರಕಟಿಸಲಾಗಿದ್ದು, ಮೆದುಳಿನಲ್ಲಿ ಭಾರೀ ಊತ ಮತ್ತು ರಕ್ತಸ್ರಾವದ ನಂತರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ತೀವ್ರ ತಲೆನೋವಿನಿಂದ ಆಸ್ಪತ್ರೆಗೆ ದಾಖಲಾಗುವ ಮೊದಲು ಸದ್ಗುರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವನ್ನು ಅನುಭವಿಸಿದರು ಎಂದು ಹೇಳಿಕೆ ತಿಳಿಸಿದೆ. ಮಾರ್ಚ್ 17 ರಂದು ರಕ್ತಸ್ರಾವವನ್ನು ನಿವಾರಿಸಲು ಅಪೋಲೋ ಆಸ್ಪತ್ರೆಯಲ್ಲಿ ತಲೆಬುರುಡೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.

”ತೀವ್ರ ತಲೆನೋವಿನ ಹೊರತಾಗಿಯೂ ಸದ್ಗುರುಗಳು ತಮ್ಮ ಕಾರ್ಯಕ್ರಮಗಳನ್ನು ಮುಂದುವರೆಸಿದರು.ಮಾರ್ಚ್ 17 ರಂದು, ಸ್ಥಿತಿಯು ತೀವ್ರವಾಗಿ ಹದಗೆಟ್ಟಿತು, ತೀವ್ರ ವಾಂತಿಯೊಂದಿಗೆ ತಲೆನೋವು ಉಲ್ಬಣಗೊಂಡಿತು. ತಲೆಬುರುಡೆಯಲ್ಲಿನ ರಕ್ತಸ್ರಾವವ ನಿಲ್ಲಿಸಲು ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದರು”ಎಂದು ಇಶಾ ಫೌಂಡೇಶನ್ ಹೇಳಿದೆ

ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ಡಾ ವಿನಿತ್ ಸೂರಿ, ಸದ್ಗುರುಗಳು ಸ್ಥಿರವಾದ ಪ್ರಗತಿಯನ್ನು ತೋರಿಸಿದ್ದಾರೆ ಮತ್ತು ಅವರ ಮೆದುಳು, ದೇಹ ಮತ್ತು ಪ್ರಮುಖ ನಿಯತಾಂಕಗಳು ಸಾಮಾನ್ಯ ಮಟ್ಟಕ್ಕೆ ಸುಧಾರಿಸಿದೆ ಎಂದು ಹೇಳಿದ್ದಾರೆ. ಸದ್ಗುರು ಅವರು ನಗುನಗುತ್ತಾ ಮಾತನಾಡಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

Advertisement

ಮೋದಿ ಕರೆ
“ಸದ್ಗುರು ಜಗ್ಗಿ ವಾಸುದೇವ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಿದ್ದೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next