Advertisement

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ: ಹೆಣ್ಣುಮಕ್ಕಳ ಸುರಕ್ಷೆ ಮಾಹಿತಿ 

11:12 AM Feb 25, 2017 | Team Udayavani |

ಬಂಟ್ವಾಳ : ಲೈಂಗಿಕ ದೌರ್ಜನ್ಯ, ಕಿರುಕುಳ ಉಂಟಾದ ಸಂದರ್ಭದಲ್ಲಿ ಮಹಿಳೆಯರು ವಿಶ್ವಾಸ ಕಳೆದುಕೊಳ್ಳದೆ ಕಾನೂನು ರೀತಿಯ ಹೋರಾಟ ನಡೆಸುವುದು ಅಗತ್ಯ ಎಂದು ಬಂಟ್ವಾಳ ನ್ಯಾಯವಾದಿ ಆಶಾ ಪ್ರಸಾದ್‌ ರೈ ತಿಳಿಸಿದರು.

Advertisement

ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ದಡಾರ ಮತ್ತು ರುಬೆಲ್ಲಾ ಸೋಂಕಿನ ಲಸಿಕೆ ನೀಡುವಿಕೆ ಹಾಗೂ ಹೆಣ್ಣು ಮಕ್ಕಳ ಸುರಕ್ಷಾ ಕಾರ್ಯಕ್ರಮದಲ್ಲಿ  ಮಾತನಾಡಿದರು.

ದಡಾರ ಹಾಗೂ ರುಬೆಲ್ಲಾ ಲಸಿಕೆಯ ಬಗ್ಗೆ ಮಾಹಿತಿ ನೀಡಿದ ಬಂಟ್ವಾಳ ಆರೋಗ್ಯ ಇಲಾಖೆ ಸಹಾಯಕಿ ಸರಸ್ವತಿ ಅವರು ದಡಾರಧಿರುಬೆಲ್ಲಾ ರೋಗದ ಲಕ್ಷಣ, ವಹಿಸಿಕೊಳ್ಳಬೇಕಾದ ಮುಂಜಾಗ್ರತೆ ಕ್ರಮದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ  ಪ.ಪೂ. ಕಾಲೇಜು ವಿಭಾಗದ ಪ್ರಾಂಶುಪಾಲ ವಸಂತ ಬಲ್ಲಾಳ್‌ , ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ಸಹಶಿಕ್ಷಕಿ ಸೌಮ್ಯಾ ವಂದಿಸಿದರು. ಸಹಶಿಕ್ಷಕ ವಿನೋದ್‌ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next