Advertisement

ಸಾಗರ: ಲಾರಿ-ಎರಡು ಬೈಕ್ ನಡುವೆ ಅಪಘಾತ; ಓರ್ವ ಸಾವು

02:36 PM Aug 07, 2022 | Team Udayavani |

ಸಾಗರ: ಲಾರಿ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಉಳ್ಳೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 206ರ ತಿರುವಿನಲ್ಲಿ ಭಾನುವಾರ ನಡೆದಿದೆ.

Advertisement

ಮೃತ ದುರ್ದೈವಿ ಪಡವಗೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಲಾರಿ, ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ ಬುಲೆಟ್ ಹಾಗೂ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಬುಲೆಟ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಪಣಂಬೂರು: 11 ಮಂದಿ ಮೀನುಗಾರರಿದ್ದ ಬೋಟ್ ಮುಳುಗಡೆ

ಸಾಗರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next