Advertisement

Sagar: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಹಾನಿ

04:31 PM Jul 17, 2023 | Team Udayavani |

ಸಾಗರ: ತಾಲೂಕಿನ ಆನಂದಪುರ ರೈಲ್ವೆ ಗೇಟ್ ಹತ್ತಿರ ಕಳೆದ ಎರಡು ದಿನಗಳಿಂದ ಕೆಟ್ಟು ನಿಂತಿದ್ದ ಗಜಾನನ ಸಾರಿಗೆ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಸೋಮವಾರ ನಡೆದಿದೆ.

Advertisement

ಎರಡು ದಿನಗಳ ಹಿಂದೆ ಬಸ್ ಹಾಳಾಗಿದ್ದರಿಂದ ರೈಲ್ವೆ ಗೇಟ್ ಸಮೀಪ ನಿಲ್ಲಿಸಲಾಗಿತ್ತು. ಆಕಸ್ಮಿಕ ಬೆಂಕಿ ತಗುಲಿದ್ದರಿಂದ ಬಸ್ ಶೇ. 75ರಷ್ಟು ಸುಟ್ಟು ಹೋಗಿದೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next