Advertisement

ಗನ್‌ಮ್ಯಾನ್‌ ಭದ್ರತೆ  ಕೊಡಲು ಹಾಲಪ್ಪ ಮನವಿ

06:55 AM Apr 18, 2018 | |

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ತಮಗೆ ಗನ್‌ಮ್ಯಾನ್‌ ಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿದ್ದಾರೆ.

Advertisement

ಸಾಗರ ಕ್ಷೇತ್ರದ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಬೇಳೂರು ಗೋಪಾಲಕೃಷ್ಣ ಅವರ ಕೆಲ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಅಲ್ಲದೆ, ಚುನಾವಣಾ ಪ್ರಚಾರ ಹೇಗೆ ನಡೆಸುತ್ತೀರೆಂದು ಕೆಲವರು ಬೆದರಿಕೆ ಒಡ್ಡಿದ್ದಾರೆ. ಹೀಗಾಗಿ ತಮಗೆ ಭದ್ರತೆ ನೀಡುವುದರ ಜತೆಗೆ, ಚುನಾವಣೆ ಸಂದರ್ಭದಲ್ಲೂ ಕ್ಷೇತ್ರದಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸುವಂತೆಯೂ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸ್ಪಂದಿಸಿದ ಎಸ್‌ಪಿ ಅಭಿನವ ಖರೆ, ಜಿಲ್ಲಾದ್ಯಂತ ಎಲ್ಲಾ ಭಾಗದಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ಸಾಗರ, ಆನಂದಪುರ, ರಿಪ್ಪನ್‌ಪೇಟೆಯಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಗನ್‌ಮ್ಯಾನ್‌ ನೀಡುವ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next