Advertisement

ಸಾಗರ: ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯ

08:15 PM Sep 29, 2022 | Team Udayavani |

ಸಾಗರ: ಕಾರೊಂದರ ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದ ಎರಡು ಕಾರು, ಒಂದು ಬಸ್ ಮತ್ತು ಒಂದು ಬೈಕ್ ಸೇರಿದಂತೆ ಸರಣಿ ಅಪಘಾತವಾಗಿರುವಂತಹ ಘಟನೆ ಸಾಗರದ ಅಂಬಾಪುರ ಬಳಿ ಗುರುವಾರ ಸಂಜೆ ನಡೆದಿದೆ.

Advertisement

ಈ ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಹಾಗೂ ಬೈಕ್ ಚಾಲಕ ಶ್ರೀಧರ ಅವರಿಗೆ ತೀವ್ರತರವಾದ ಗಾಯವಾಗಿದೆ. ಗಾಯಾಳುಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಎರಡು ಕಾರುಗಳು ಜಖಂ ಆಗಿವೆ. ಬೈಕ್ ಅಪ್ಪಚ್ಚಿಯಾಗಿದ್ದು, ಬಸ್ ಗೆ ಹಾನಿಯಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಪ್ರವೀಣ್ ಕುಮಾರ್, ಸಬ್ ಇನ್ಸ್‌ಪೆಕ್ಟರ್ ಸುಜಾತ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದಿಂದಾಗಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next