Advertisement

ಸಾಗರ: ಕಾರಿನ ಮೇಲೆ ಬಿದ್ದ ಬೃಹತ್ ಮರದ ರೆಂಬೆ; ಚಾಲಕ ಪಾರು

03:25 PM Feb 19, 2022 | Team Udayavani |

ಸಾಗರ: ಇಲ್ಲಿನ ಚಾಮರಾಜಪೇಟೆಯ ಸಂಜೀವಿನಿ ಆಸ್ಪತ್ರೆ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಉರುಳಿ ಬಿದ್ದಿದ್ದು ಚಾಲಕ ಅದೃಷ್ಟವಶಾತ್ ದೊಡ್ಡ ಅಪಾಯದಿಂದ ಪಾರಾದ ಘಟನೆ ಶನಿವಾರ ನಡೆದಿದೆ.

Advertisement

ಶಿವಮೊಗ್ಗದ ನಾರಾಯಣ ಹೃದಯಾಲಯದವರು ಸಾಗರದಲ್ಲಿ ಕಾರ್ಯಕ್ರಮ ನಿಮಿತ್ತ ಬಾಡಿಗೆ ಕಾರಿನಲ್ಲಿ ಬಂದಿದ್ದರು. ನೆರಳು ಇರುವುದರಿಂದ ಕಾರನ್ನು ಚಾಮರಾಜಪೇಟೆಯ ಸಂಜೀವಿನಿ ಆಸ್ಪತ್ರೆ ಎದುರು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಮರದ ದೊಡ್ಡ ರೆಂಬೆಯೊಂದು ಮುರಿದು ಕಾರಿನ ಮೇಲೆ ಬಿದ್ದಿದೆ.

ಚಾಲಕ ಹಳದಪ್ಪ ಕಾರಿನಲ್ಲಿದ್ದು, ಕೊಂಬೆ ಕಾರಿನ ಮತ್ತೊಂದು ಪಕ್ಕದಲ್ಲಿ ಬಿದ್ದಿದ್ದರಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next