Advertisement

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

06:55 PM Jul 01, 2024 | Vishnudas Patil |

ಸಾಗರ: ಮರದ ಕೊಂಬೆ ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಕೊಂಬೆಯೊಂದು ಆಕಸ್ಮಿಕವಾಗಿ ತಲೆಯ ಮೇಲೆ ಬಿದ್ದು ವ್ಯಕ್ತಿಯೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ.

Advertisement

ತಾಳಗುಪ್ಪ ಸಮೀಪದ ಹಿರೇಮನೆಯ ಅಶೋಕ (58) ಎಂ.ಎಸ್.  ಮೃತ ದುರ್ದೈವಿ.  ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮನೆಯ ಹಿಂಭಾಗದ ಮರಗಳ ರೆಂಬೆಯನ್ನು ಕಡಿಸುತ್ತಿದ್ದ ಸಂದರ್ಭದಲ್ಲಿ ಮರದ ಕೊಂಬೆಗೆ ಹಾಕಿದ್ದ ಹಗ್ಗ ಏಕಾಏಕಿ ತುಂಡಾಗಿ ಮರದ ರೆಂಬೆ ಅಶೋಕರ ತಲೆಯ ಮೇಲೆ ಬಿದ್ದು, ಅವರು ತೀವ್ರವಾಗಿ ಗಾಯಗೊಂಡರು. ತತ್ ಕ್ಷಣ ಅವರನ್ನು ತಾಳಗುಪ್ಪದ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆತರುವ ಪ್ರಯತ್ನ ನಡೆಯಿತಾದರೂ ಅಶೋಕ್ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next