Advertisement

Sagara: ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಕುಟುಕುವ ಚೇಳಿನ ಬುದ್ಧಿ

08:48 PM Jul 10, 2024 | Esha Prasanna |

ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರದ್ದು ಚೇಳಿನ ಬುದ್ಧಿ. ತನಗೆ ಸಹಾಯ ಮಾಡಿದವರಿಗೂ ಕುಟುಕುವ ಬುದ್ಧಿ ಹೊಂದಿರುವ ಬೇಳೂರು ಚುನಾವಣೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕಾಗೋಡು ತಿಮ್ಮಪ್ಪ ಅವರನ್ನೂ ಬಿಟ್ಟಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ವ್ಯಂಗ್ಯವಾಡಿದ್ದಾರೆ.

Advertisement

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡವರ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಈ ಚೇಳಿನ ಕೈನಲ್ಲಿ ಹಿಂದೆ ನಾವೆಲ್ಲಾ ಕುಟುಕಿಸಿಕೊಂಡಿದ್ದೇವೆ. ಸರ್ಕಾರ ಕಾಗೋಡು ತಿಮ್ಮಪ್ಪ ಅವರ ಸ್ವಾಧೀನದಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಜಾಗ ಮಂಜೂರು ಮಾಡಿದೆ.

ಗೋಪಾಲಕೃಷ್ಣ ಬೇಳೂರು ತಾವು ಗೆದ್ದ ನಂತರ ಆ ಜಾಗ  ವಶಕ್ಕೆ ಪಡೆಯುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಿಂದೆ ಕಂಸ, ಧ್ವಂಸ ಎಂದು ಕಾಗೋಡು ತಿಮ್ಮಪ್ಪರನ್ನು ಟೀಕಿಸಿದ್ದರು. ಆದರೂ ಕಾಗೋಡು ತಿಮ್ಮಪ್ಪ ಅವರು ಬೇಳೂರು ಗೆಲುವಿಗೆ ಶ್ರಮಿಸಿದ್ದಾರೆ. ಅಂತಹವರ ಕಾಲೇಜಿಗೆ ಸರ್ಕಾರ ನೀಡಿದ ಜಾಗವನ್ನು ವಾಪಸ್ ಪಡೆಯಿರಿ ಎಂದು ಪತ್ರ ಬರೆದಿರುವ ದಾಖಲೆ ನನ್ನ ಬಳಿ ಇದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಪಕ್ಷದ ಪ್ರಮುಖರು ಮಾಡಬೇಕು ಎಂದರು.

ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ: 
ಅಭಿವೃದ್ಧಿ ವಿಷಯವಾಗಿ ಹಣ ತಂದಿದ್ದು ತಾವೇ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಅವರು ಅಭಿವೃದ್ಧಿಗೆ ಯಾವ ರೀತಿ ಹಣ ತಂದಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುತ್ತದೆ. ಪಕ್ಷದ ಮುಖಂಡರು ಕಾರ್ಯಕರ್ತರು ಯಾವುದಕ್ಕೂ ಹಿಂದೆ ಸರಿಯದೆ ಪಕ್ಷ ಸಂಘಟನೆಗೆ ತೊಡಗಿಕೊಳ್ಳಬೇಕು. ಮುಂದಿನ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಾ. ರಾಜನಂದಿನಿ, ಗಣೇಶಪ್ರಸಾದ್, ದೇವೇಂದ್ರಪ್ಪ ಯಲಕುಂದ್ಲಿ, ಮಧುರಾ ಶಿವಾನಂದ್, ವಿ.ಮಹೇಶ್, ಜನಾರ್ದನ ಉಡುಪ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next