Advertisement

Sagara ತ್ವರಿತವಾಗಿ ಸಿಗಂದೂರು- ಹಸಿರುಮಕ್ಕಿ ಸೇತುವೆ ಕಾಮಗಾರಿ ಮುಕ್ತಾಯಕ್ಕೆ ಮನವಿ

08:47 PM Oct 13, 2023 | Shreeram Nayak |

ಸಾಗರ: ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸಿಗಂದೂರು ಮತ್ತು ಹಸಿರುಮಕ್ಕಿಯ ಸೇತುವೆ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಬೆಂಗಳೂರಿನಲ್ಲಿ ಶುಕ್ರವಾರ ಭೇಟಿ ಮಾಡಿ ಮಾತನಾಡಿ, ತ್ವರಿತವಾಗಿ ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು.

Advertisement

ಈ ವೇಳೆ ಮಾತನಾಡಿದ ಅವರು, ಈ ಸೇತುವೆಗಳು ಹಿನ್ನೀರ ಮುಳುಗಡೆ ಭಾಗದ ಜನರ ಸಂಪರ್ಕ ಕೊಂಡಿ, ಬದುಕಿನ ಜೀವನಾಡಿ. ಸಿಗಂದೂರು ಸೇತುವೆ ಮತ್ತು ಹಸಿರುಮಕ್ಕಿ ಸೇತುವೆ ಕಾಮಗಾರಿ ಸ್ಥಳಕ್ಕೆ ಆಗಮಿಸಿ ಕೆಲಸ ವೀಕ್ಷಿಸಿ ಸಾಧ್ಯವಾದಷ್ಟು ಬೇಗ ಇವುಗಳನ್ನು ಪೂರ್ತಿಗೊಳಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಕೋರಿದರು.

 

Advertisement

Udayavani is now on Telegram. Click here to join our channel and stay updated with the latest news.

Next