Advertisement

Sagara ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರ ಬಂಧನ

09:07 PM Sep 12, 2023 | Shreeram Nayak |

ಸಾಗರ: ನಗರದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಟೌನ್ ಪೊಲೀಸರ ತಂಡ ಪತ್ತೆ ಹಚ್ಚಿ ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ.

Advertisement

ಇಲ್ಲಿನ ಜನ್ನತ್ ಗಲ್ಲಿಯವರಾದ ಸಾಜಿದ್(೩೦) ಹಾಗೂ ಇಮ್ರಾನ್ ಬಂಧಿತ ಆರೋಪಿಗಳು. ಮಧ್ಯಾಹ್ನ ಗಾಂಜಾ ಸೇವನೆ ಮಾಡಿದ ಈ ಇಬ್ಬರನ್ನು ಪೊಲೀಸರು ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಪೊಲೀಸರು ಆರೋಪಿತರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಗರದ ಡಿವೈಎಸ್‌ಪಿ ಗೋಪಾಲಕೃಷ್ಣ ಟಿ ನಾಯಕ್ ಅವರ ನಿರ್ದೇಶನ ಹಾಗೂ ಇನ್ಸ್‌ಪೆಕ್ಟರ್ ಸೀತಾರಾಮ್ ಜೆ.ಬಿ. ಅವರ ಮಾರ್ಗದರ್ಶನದಲ್ಲಿ ಸಾಗರ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ್, ಶ್ರೀಪತಿ ಗಿನ್ನಿ, ಪಿಎಸ್‌ಐ ಟಿ.ಡಿ ಸಾಗರ್ಕರ್ ಹಾಗೂ ಸಿಬ್ಬಂದಿಗಳಾದ ರತ್ನಾಕರ್, ಪ್ರಭಾಕರ, ಕೃಷ್ಣಮೂರ್ತಿ, ವಿಶ್ವನಾಥ, ವಿಕಾಸ್ ಅವರನ್ನು ಒಳಗೊಂಡ ತಂಡ ಪ್ರಕರಣದ ಪತ್ತೆಯಲ್ಲಿ ಕೆಲಸ ಮಾಡಿದೆ.

ನಗರದಲ್ಲಿ ಇತ್ತೀಚೆಗೆ ಪೊಲೀಸರು ಗಾಂಜಾ ಸೇವನೆ ಮಾಡುವವರನ್ನು ಪತ್ತೆ ಮಾಡಿ ಜೈಲಿಗೆ ಕಳುಹಿಸುತ್ತಿದ್ದಾರೆ. ಆದರೆ ಸಾಗರಕ್ಕೆ ಗಾಂಜಾ ಎಲ್ಲಿಂದ ಬರುತ್ತದೆ, ಇಲ್ಲಿನ ವ್ಯಾಪಾರಿಗಳು ಯಾರು ಎಂಬಂತಹ ವಿಷಯದಲ್ಲಿ ತನಿಖೆ ಮಾಡಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next