Advertisement

Sagara ; ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿಗಳ ಬಂಧನಕ್ಕೆ ಹಿಂಜಾವೇ ಆಗ್ರಹ

06:36 PM Aug 24, 2023 | Vishnudas Patil |

ಸಾಗರ: ಪಟ್ಟಣದ ಜೆಪಿ ನಗರದ ಅಪ್ರಾಪ್ತ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ತತ್ ಕ್ಷಣ ಬಂಧಿಸುವಂತೆ ಒತ್ತಾಯಿಸಿ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಪೇಟೆ ಠಾಣೆ ಮೂಲಕ ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪಟ್ಟಣದ ಜೆಪಿ ನಗರದ ಅಪ್ರಾಪ್ತ ಹುಡುಗಿಯನ್ನು ಆ. 19 ರಂದು ಇಬ್ಬರು ಕಾಮುಕರು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಾಲಕಿಯನ್ನು ಮನೆಗೆ ಬಿಟ್ಟು ಹೋಗುವಾಗ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಈ ಘಟನೆಯನ್ನು ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದರು.

ಘಟನೆ ನಡೆದು ನಾಲೈದು ದಿನ ಕಳೆದರೂ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸಿಲ್ಲ. ಪೊಲೀಸರಿಗೆ ಆರೋಪಿಗಳ ಬಗ್ಗೆ ಅಗತ್ಯ ಮಾಹಿತಿಯನ್ನು ಸಹ ನೀಡಲಾಗಿದೆ. ಆದರೂ ಪೊಲೀಸರು ಮೀನಾಮೇಷ ಎಣಿಸುತ್ತಿರುವುದು ಏಕೆ ಎನ್ನುವುದು ಅರ್ಥವಾಗುತ್ತಿಲ್ಲ. ಮುಂದಿನ ಎರಡು ದಿನಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸದೆ ಹೋದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಸಾಗರ ಬಂದ್‌ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆ ಪ್ರಮುಖರಾದ ಕೋಮಲ್ ರಾಘವೇಂದ್ರ, ಆಟೋ ಗಣೇಶ್, ಸಂತೋಷ್, ಕೆ.ವಿ.ಪ್ರವೀಣ, ವಿನಯ ಶೇಟ್, ರಾಘವೇಂದ್ರ ಕಾಮತ್, ಆದಿತ್ಯ, ನಂದೀಶ್ ಸೂರಗುಪ್ಪೆ, ಪರಶುರಾಮ್, ಪವನ್ ಮಾಸೂರು, ದೀಪಕ್ ಭಂಡಾರಿ, ಶ್ರೀಧರ್ ಸಾಗರ, ಕಿರಣ್ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next