Advertisement

Sagara ಅನುಮತಿ ಪಡೆಯದೆ ಬೈಕ್ ರ‍್ಯಾಲಿ; ದೂರು ದಾಖಲು

05:58 PM Sep 19, 2023 | Shreeram Nayak |

ಸಾಗರ: ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಅನುಮತಿ ಪಡೆಯದೆ ಬೈಕ್ ರ‍್ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ನಗರ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳುಹಿಸಿದ ಘಟನೆ ಸೋಮವಾರ ನಡೆದಿದೆ.

Advertisement

ಗಣಪತಿ ಹಬ್ಬದ ದಿನ ಮಧ್ಯಾಹ್ನ ಪಟ್ಟಣದ ವಿವಿಧೆಡೆ 10-15 ದ್ವಿಚಕ್ರ ವಾಹನಗಳಿಗೆ ಧ್ವಜ ಕಟ್ಟಿಕೊಂಡು ಯುವಕರು ಒಂದು ಕೋಮಿನ ಪ್ರಾರ್ಥನಾ ಮಂದಿರಗಳ ಎದುರು ದ್ವಿಚಕ್ರ ವಾಹನ ರ‍್ಯಾಲಿ ನಡೆಸಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡು, ಆಪಾದಿತರ ಪತ್ತೆಗೆ ಬೆನ್ನು ಬಿದ್ದಿದ್ದರು.

ಸಿಸಿಟಿವಿ ದೃಶ್ಯಾವಳಿ ಗಮನಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ರ‍್ಯಾಲಿಯಲ್ಲಿದ್ದವರ ವಿರುದ್ಧ ಐಪಿಸಿ ಸೆಕ್ಷನ್ 279, 188, 189, 190ರ ಅಡಿ ಕೇಸು ದಾಖಲಿಸಿದ್ದರು. ಅಲ್ಲದೆ ನಗರದ ನಾಲ್ವರನ್ನು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್ ನೇತೃತ್ವದಲ್ಲಿ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು, ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘನೆಯಂತಹ ಪ್ರಕರಣ ನಡೆಯದಿರುವಂತೆ ಖಡಕ್ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಬಾಕಿ ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next