Advertisement

Sagara: ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ

04:45 PM Oct 05, 2023 | Team Udayavani |

ಸಾಗರ: ಇಲ್ಲಿನ ಗಣಪತಿ ಕೆರೆಯಲ್ಲಿ ಗುರುವಾರ ಬೆಳಿಗ್ಗೆ ಸುಮಾರು ೨೫ ವರ್ಷದ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.

Advertisement

ಕೆರೆಯಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಯುವಕ ಒಂದು ದಿನದ ಹಿಂದೆ ಕೆರೆಯಲ್ಲಿ ಬಿದ್ದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಯುವಕ ಯಾವ ಊರಿನವನು ಎಂದು ಈತನಕ ಪತ್ತೆಯಾಗಿಲ್ಲ. ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಇನ್ಯಾರೋ ಕೆರೆಗೆ ತಳ್ಳಿದ್ದಾರೋ ಎನ್ನುವುದು ತನಿಖೆಯಿಂದ ಮಾತ್ರವೇ ತಿಳಿದು ಬರಬೇಕಾಗಿದೆ.

ನಗರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಶವವನ್ನು ಮೇಲಕ್ಕೆತ್ತಿ ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸಿದ್ದು ಪೋಸ್ಟ್‌ಮಾರ್ಟಂ ನಡೆಸಲಾಗಿದೆ.

ಇದನ್ನೂ ಓದಿ: KVG ಎಂ.ಎಸ್ ರಾಮಕೃಷ್ಣ ಕೊಲೆ ಪ್ರಕರಣ: ಡಾ| ರೇಣುಕಾ ಪ್ರಸಾದ್ ಗೆ ಜೀವಾವಧಿ ಶಿಕ್ಷೆ

Advertisement
Advertisement

Udayavani is now on Telegram. Click here to join our channel and stay updated with the latest news.

Next