Advertisement

Sagara;ನಾಯಿ ಕಚ್ಚಿ ಗಾಯ: ನಾಡಿಗೆ ಬಂದಿದ್ದ ಜಿಂಕೆ ಹೃದಯಾಘಾತದಿಂದ ಸಾವು

10:28 PM Aug 23, 2023 | Vishnudas Patil |

ಸಾಗರ: ಆಹಾರ ಹುಡುಕಿ ಕಾಡಿನಿಂದ ನಾಡಿಗೆ ಬಂದಿದ್ದ 2 ವರ್ಷದ ಜಿಂಕೆಗೆ ನಾಯಿ ಕಚ್ಚಿದ್ದು, ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ.

Advertisement

ತಾಲೂಕಿನ ಹೊರವಲಯದ ಮಾಲ್ವೆ ಕಾನುಗೋಡು ಗ್ರಾಮದಲ್ಲಿ ಕಾಣಿಸಿಕೊಂಡ ಜಿಂಕೆಯನ್ನು ನಾಯಿ ಕಚ್ಚಿ ಗಾಯಗೊಳಿಸಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ನಾಯಿಯನ್ನು ಓಡಿಸಿ, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಉಪವಲಯ ಅರಣ್ಯ ಅಧಿಕಾರಿ ಅಣ್ಣಪ್ಪ ನೇತೃತ್ವದ ತಂಡ ಜಿಂಕೆಯನ್ನು ಸುರಕ್ಷಿತವಾಗಿ ಸಾಗರದ ಪಶು ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಜಿಂಕೆಗೆ ಜ್ವರ ಕಾಣಿಸಿಕೊಂಡಿದ್ದರಿಂದ ಹೃದಯಾಘಾತವಾಗಿ ಮೃತಪಟ್ಟಿದೆ.

ಈ ಕಾರ್ಯಾಚರಣೆಯಲ್ಲಿ ಬೀಟ್ ಫಾರೆಸ್ಟರ್ ಯುವರಾಜ್, ಪಶು ವೈದ್ಯಾಧಿಕಾರಿ ಡಾ. ಅರವಿಂದ್ ಇದ್ದರು. ಗ್ರಾಮಸ್ಥರು ಅರಣ್ಯ ಇಲಾಖಾ ಸಿಬ್ಬಂದಿಗೆ ಸಹಕಾರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next